ಹೊಸದಿಲ್ಲಿ : ಅಲಹಾಬಾದ್ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಶ್ವ ಹಿಂದು ಪರಿಷತ್ (ವಿಎಚ್ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.
ವಿಎಚ್ಪಿ ಕಾರ್ಯಕ್ರಮದಲ್ಲಿ ಶೇಖರ ಅವರು ನೀಡಿದ್ದ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ವಿವರಣೆ ನೀಡುವಂತೆ ಇತ್ತೀಚೆಗೆ ಸೂಚಿಸಿತ್ತು.
ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ಬಂದ ವೇಳೆ ಆ ಕುರಿತು ಕೊಲಿಜಿಯಂ ವಿವರಣೆ ಕೇಳುತ್ತದೆ. ಮತ್ತೆ ಹೇಳಿಕೆ ಕುರಿತು ವಿವರಣೆ ನೀಡಲು ಅವಕಾಶ ನೀಡುತ್ತದೆ.
ಆ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್ನ ಮೂಲಗಳು ತಿಳಿಸಿವೆ.
ಡಿ.8 ನಡೆದ ವಿಎಚ್ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರೀಕ ಸಂಹಿತೆ ಅಗತ್ಯತೆ, ಧರ್ಮನಿರಪೇಕ್ಷತೆಯ ಬಗ್ಗೆ ಪ್ರತಿಪಾದಿಸಿದ್ದರು.
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…