ಹೊಸದಿಲ್ಲಿ : ಅಲಹಾಬಾದ್ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಶ್ವ ಹಿಂದು ಪರಿಷತ್ (ವಿಎಚ್ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ.
ವಿಎಚ್ಪಿ ಕಾರ್ಯಕ್ರಮದಲ್ಲಿ ಶೇಖರ ಅವರು ನೀಡಿದ್ದ ಸುದ್ದಿಗಳನ್ನು ಗಮನಿಸಿದ್ದ ಸುಪ್ರೀಂ ಕೋರ್ಟ್, ವಿವರಣೆ ನೀಡುವಂತೆ ಇತ್ತೀಚೆಗೆ ಸೂಚಿಸಿತ್ತು.
ನ್ಯಾಯಮೂರ್ತಿಗಳಿಂದ ಯಾವುದೇ ವಿವಾದಾತ್ಮಕ ಹೇಳಿಕೆಗಳು ಬಂದ ವೇಳೆ ಆ ಕುರಿತು ಕೊಲಿಜಿಯಂ ವಿವರಣೆ ಕೇಳುತ್ತದೆ. ಮತ್ತೆ ಹೇಳಿಕೆ ಕುರಿತು ವಿವರಣೆ ನೀಡಲು ಅವಕಾಶ ನೀಡುತ್ತದೆ.
ಆ ನಿಟ್ಟಿನಲ್ಲಿ ಅಲಹಾಬಾದ್ ಹೈಕೋರ್ಟ್ ನ ನ್ಯಾಯಮೂರ್ತಿ ಸಹ ಕೊಲಿಜಿಯಂ ಮುಂದೆ ಹಾಜರಾಗಿ ವಿವರಣೆ ನೀಡುವ ಸಾಧ್ಯತೆಗಳಿವೆ ಎಂದು ಸುಪ್ರೀಂ ಕೋರ್ಟ್ನ ಮೂಲಗಳು ತಿಳಿಸಿವೆ.
ಡಿ.8 ನಡೆದ ವಿಎಚ್ಪಿ ಕಾನೂನು ವಿಭಾಗದ ಪ್ರಾಂತೀಯ ಸಮಾರಂಭದಲ್ಲಿ ಏಕರೂಪ ನಾಗರೀಕ ಸಂಹಿತೆ ಅಗತ್ಯತೆ, ಧರ್ಮನಿರಪೇಕ್ಷತೆಯ ಬಗ್ಗೆ ಪ್ರತಿಪಾದಿಸಿದ್ದರು.
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…