ದೇಶ- ವಿದೇಶ

ಮತಾಂತರಕ್ಕೆ ಅನುಮತಿ: ಮ.ಪ್ರ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

ಹೊಸದಿಲ್ಲಿ: ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ ಪ್ರಕಾರ ಮತಾಂತರದ ವೇಳೆ ಜಿಲ್ಲಾಧಿಕಾರಿ ಎದುರು ಘೋಷಣೆ ಮಾಡುವ ಅಗತ್ಯವನ್ನು ತಳ್ಳಿಹಾಕಿದ್ದ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಹೈಕೋರ್ಟ್ ತೀರ್ಪಿನ ವಿರುದ್ಧ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ಸಂಬಂಧಪಟ್ಟವರಿಗೆ ನೋಟಿಸ್ ನೀಡಿತು. ಈ ವೇಳೆ ಅದು, “ಎಲ್ಲ ಮತಾಂತರಗಳನ್ನು ಕಾನೂನುಬಾಹಿರವೆನ್ನಲಾಗದು” ಎಂದಿತು. ಮುಂದುವರೆದು, ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಮತ್ತು ಮಧ್ಯಂತರ ಪರಿಹಾರ ಕೋರಿಕೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿತು. ಫೆಬ್ರವರಿ 7ಕ್ಕೆ ಪ್ರತಿಕ್ರಿಯಿಸಲು ಸೂಚಿಸಿತು.

ಇಂದು ನಡೆದ ವಿಚಾರಣೆಯ ವೇಳೆ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, “ಮದುವೆ ಅಥವಾ ಮತಾಂತರಕ್ಕೆ ಯಾವುದೇ ನಿಷೇಧವಿಲ್ಲ. ಜಿಲ್ಲಾಧಿಕಾರಿಗೆ (ಮತಾಂತರದ) ಮಾಹಿತಿ ನೀಡಬೇಷ್ಟೇ. ತಡೆಯಾಜ್ಞೆಯು ಇದನ್ನಷ್ಟೇ ಮಾಡಲಿದೆ” ಎಂದರು. ಇದಕ್ಕೆ ಉತ್ತರಿಸಿದ ಪೀಠ, ಇದನ್ನು ಪರಿಗಣಿಸಲು ಸಾಧ್ಯವಿಲ್ಲ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತಿವಾದ ಮಂಡಿಸುವುದಿದ್ದರೆ ಅದನ್ನು ಮುಂದಿನ ವಿಚಾರಣೆಯ ದಿನಾಂಕದಂದು (ಫೆ. 7) ಪ್ರಸ್ತುತಪಡಿಸಬಹುದು” ಎಂದಿತು.

andolana

Recent Posts

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಅಪಾಯ

ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ ೧೮ರ ಬುಧವಾರ ಆರಂಭವಾಗಿದೆ. ಅಂದು ಬಹುತೇಕ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸಮವಸ್ತ್ರ…

2 hours ago

ಯುಗಾದಿ; ಹೊನ್ನೇರು ಕಟ್ಟಿ ಸಂಭ್ರಮಿಸಿದ ರೈತರು

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ…

2 hours ago

ಕೇರಳಕ್ಕೆ ನೂರಾರು ಟಿಪ್ಪರ್‌ಗಳಲ್ಲಿ ರಾಜ್ಯದ ಸಂಪತ್ತು ಸಾಗಣೆ

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ…

2 hours ago

ರಸ್ತೆಯ ಮೇಲೆ ಹರಿಯುವ ಒಳಚರಂಡಿ ನೀರಿಂದ ಅನೈರ್ಮಲ್ಯ

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ…

2 hours ago

ಏ.೧೦ರಿಂದ ವಸ್ತು ಪ್ರದರ್ಶನದಲ್ಲಿ ಬೇಸಿಗೆ ಮೇಳ

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ…

2 hours ago

ಪಾಳು ಬಿದ್ದ ಪಾರ್ಕ್.. ಶುಚಿ ಇಲ್ಲದ ಶೌಚಾಲಯ..

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್…

2 hours ago