ದೇಶ- ವಿದೇಶ

ಮತಾಂತರಕ್ಕೆ ಅನುಮತಿ: ಮ.ಪ್ರ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

ಹೊಸದಿಲ್ಲಿ: ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ ಪ್ರಕಾರ ಮತಾಂತರದ ವೇಳೆ ಜಿಲ್ಲಾಧಿಕಾರಿ ಎದುರು ಘೋಷಣೆ ಮಾಡುವ ಅಗತ್ಯವನ್ನು ತಳ್ಳಿಹಾಕಿದ್ದ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಹೈಕೋರ್ಟ್ ತೀರ್ಪಿನ ವಿರುದ್ಧ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ಸಂಬಂಧಪಟ್ಟವರಿಗೆ ನೋಟಿಸ್ ನೀಡಿತು. ಈ ವೇಳೆ ಅದು, “ಎಲ್ಲ ಮತಾಂತರಗಳನ್ನು ಕಾನೂನುಬಾಹಿರವೆನ್ನಲಾಗದು” ಎಂದಿತು. ಮುಂದುವರೆದು, ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಮತ್ತು ಮಧ್ಯಂತರ ಪರಿಹಾರ ಕೋರಿಕೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿತು. ಫೆಬ್ರವರಿ 7ಕ್ಕೆ ಪ್ರತಿಕ್ರಿಯಿಸಲು ಸೂಚಿಸಿತು.

ಇಂದು ನಡೆದ ವಿಚಾರಣೆಯ ವೇಳೆ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, “ಮದುವೆ ಅಥವಾ ಮತಾಂತರಕ್ಕೆ ಯಾವುದೇ ನಿಷೇಧವಿಲ್ಲ. ಜಿಲ್ಲಾಧಿಕಾರಿಗೆ (ಮತಾಂತರದ) ಮಾಹಿತಿ ನೀಡಬೇಷ್ಟೇ. ತಡೆಯಾಜ್ಞೆಯು ಇದನ್ನಷ್ಟೇ ಮಾಡಲಿದೆ” ಎಂದರು. ಇದಕ್ಕೆ ಉತ್ತರಿಸಿದ ಪೀಠ, ಇದನ್ನು ಪರಿಗಣಿಸಲು ಸಾಧ್ಯವಿಲ್ಲ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತಿವಾದ ಮಂಡಿಸುವುದಿದ್ದರೆ ಅದನ್ನು ಮುಂದಿನ ವಿಚಾರಣೆಯ ದಿನಾಂಕದಂದು (ಫೆ. 7) ಪ್ರಸ್ತುತಪಡಿಸಬಹುದು” ಎಂದಿತು.

andolana

Recent Posts

ಅಸ್ಸಾಂನಲ್ಲಿ ಭೀಕರ ಪ್ರವಾಹ: ಜನಜೀವನ ಅಸ್ತವ್ಯಸ್ತ

ದಿಸ್ಪುರ್:‌ ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…

1 hour ago

ಕೈಕೊಟ್ಟ ಮುಂಗಾರು: ಕಬಿನಿ ಜಲಾಶಯದ ನೀರಿನ ಮಟ್ಟ ಮತ್ತಷ್ಟು ಕುಸಿತ

ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…

1 hour ago

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

7 hours ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

7 hours ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

7 hours ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

7 hours ago