ದೇಶ- ವಿದೇಶ

ಮತಾಂತರಕ್ಕೆ ಅನುಮತಿ: ಮ.ಪ್ರ. ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ನಕಾರ

ಹೊಸದಿಲ್ಲಿ: ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ ಪ್ರಕಾರ ಮತಾಂತರದ ವೇಳೆ ಜಿಲ್ಲಾಧಿಕಾರಿ ಎದುರು ಘೋಷಣೆ ಮಾಡುವ ಅಗತ್ಯವನ್ನು ತಳ್ಳಿಹಾಕಿದ್ದ ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

ಹೈಕೋರ್ಟ್ ತೀರ್ಪಿನ ವಿರುದ್ಧ ಮಧ್ಯಪ್ರದೇಶ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ನ್ಯಾಯಮೂರ್ತಿಗಳಾದ ಎಂ ಆರ್ ಶಾ ಮತ್ತು ಸಿ ಟಿ ರವಿಕುಮಾರ್ ಅವರಿದ್ದ ಪೀಠ ಸಂಬಂಧಪಟ್ಟವರಿಗೆ ನೋಟಿಸ್ ನೀಡಿತು. ಈ ವೇಳೆ ಅದು, “ಎಲ್ಲ ಮತಾಂತರಗಳನ್ನು ಕಾನೂನುಬಾಹಿರವೆನ್ನಲಾಗದು” ಎಂದಿತು. ಮುಂದುವರೆದು, ವಿಶೇಷ ಅನುಮತಿ ಅರ್ಜಿ (ಎಸ್‌ಎಲ್‌ಪಿ) ಮತ್ತು ಮಧ್ಯಂತರ ಪರಿಹಾರ ಕೋರಿಕೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಲು ತಿಳಿಸಿತು. ಫೆಬ್ರವರಿ 7ಕ್ಕೆ ಪ್ರತಿಕ್ರಿಯಿಸಲು ಸೂಚಿಸಿತು.

ಇಂದು ನಡೆದ ವಿಚಾರಣೆಯ ವೇಳೆ ರಾಜ್ಯ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿ, “ಮದುವೆ ಅಥವಾ ಮತಾಂತರಕ್ಕೆ ಯಾವುದೇ ನಿಷೇಧವಿಲ್ಲ. ಜಿಲ್ಲಾಧಿಕಾರಿಗೆ (ಮತಾಂತರದ) ಮಾಹಿತಿ ನೀಡಬೇಷ್ಟೇ. ತಡೆಯಾಜ್ಞೆಯು ಇದನ್ನಷ್ಟೇ ಮಾಡಲಿದೆ” ಎಂದರು. ಇದಕ್ಕೆ ಉತ್ತರಿಸಿದ ಪೀಠ, ಇದನ್ನು ಪರಿಗಣಿಸಲು ಸಾಧ್ಯವಿಲ್ಲ ಮತ್ತು ರಾಜ್ಯ ಸರ್ಕಾರಕ್ಕೆ ಪ್ರತಿವಾದ ಮಂಡಿಸುವುದಿದ್ದರೆ ಅದನ್ನು ಮುಂದಿನ ವಿಚಾರಣೆಯ ದಿನಾಂಕದಂದು (ಫೆ. 7) ಪ್ರಸ್ತುತಪಡಿಸಬಹುದು” ಎಂದಿತು.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

5 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

5 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

6 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

6 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

6 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

7 hours ago