ದೇಶ- ವಿದೇಶ

ಮುನ್ನೆಚ್ಚರಿಕೆ ಡೋಸ್ ಆಗಿ ಕೋರ್ಬೆವ್ಯಾಕ್ಸ್

ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್ಟಿಎಜಿಐ) ಕೋರ್ಬೆವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್-೧೯ ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ.

‘ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್-೧೯ ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್ ೪ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.

andolana

Recent Posts

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

13 mins ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

18 mins ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

42 mins ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

1 hour ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

1 hour ago

ಬೆಳಗಾವಿ-ಮುಂಬೈ ಇಂಡಿಗೋ ವಿಮಾನ ಸೇವೆ: ದಿನಾಂಕ ಫಿಕ್ಸ್‌

ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…

2 hours ago