ದೇಶ- ವಿದೇಶ

ಮುನ್ನೆಚ್ಚರಿಕೆ ಡೋಸ್ ಆಗಿ ಕೋರ್ಬೆವ್ಯಾಕ್ಸ್

ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್ಟಿಎಜಿಐ) ಕೋರ್ಬೆವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್-೧೯ ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ.

‘ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್-೧೯ ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್ ೪ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.

andolana

Recent Posts

ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ಧ: ಸಚಿವ ಕೃಷ್ಣಭೈರೇಗೌಡ

ಬೆಳಗಾವಿ: ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವ್ಯಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ…

31 seconds ago

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ವಿಚಾರ: ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು.!

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ. ಈ ಬಗ್ಗೆ ಸಾರಿಗೆ ಸಚಿವ…

9 mins ago

ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರ

ನವದೆಹಲಿ: ಲೋಕಸಭೆಯಲ್ಲಿ ವಿ-ಬಿಜಿ ರಾಮ್‌ ಜಿ ಮಸೂದೆ ಅಂಗೀಕಾರಗೊಂಡಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಇಂದು ಲೋಕಸಭೆಯು ರೋಜ್‌ಗಾರ್‌ ಮತ್ತು ಅಜೀವಿಕಾ…

38 mins ago

ಕಳೆದ 3 ವರ್ಷಗಳಲ್ಲಿ 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿ: ಸಚಿವ ಪರಮೇಶ್ವರ್‌

ಬೆಳಗಾವಿ: ರಾಜ್ಯದಲ್ಲಿ ಪೊಲೀಸ್‌ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು…

51 mins ago

ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ

ಬೆಂಗಳೂರು: ಪಾರಿವಾಳದ ಮಲ-ಮೂತ್ರದಿಂದ ಸೋಂಕು, ಉಸಿರಾಟದ ತೊಂದರೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು…

2 hours ago

ಕಳ್ಳತನ ಪ್ರಕರಣ: ಸ್ಯಾಂಡಲ್‌ವುಡ್‌ ನಿರ್ಮಾಪಕ ಹರ್ಷವರ್ಧನ್‌ ಅರೆಸ್ಟ್‌

ಕಾರವಾರ: ಪತ್ನಿ ಕಿಡ್ನ್ಯಾಪ್‌ ಮಾಡಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ನಿರ್ಮಾಪಕ ಹರ್ಷವರ್ಧನ್‌ ಇದೀಗ ಮನೆಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ…

3 hours ago