ದೇಶ- ವಿದೇಶ

ಮುನ್ನೆಚ್ಚರಿಕೆ ಡೋಸ್ ಆಗಿ ಕೋರ್ಬೆವ್ಯಾಕ್ಸ್

ಹೊಸದಿಲ್ಲಿ: 18ವರ್ಷ ಮೇಲ್ಪಟ್ಟವರ ಪೈಕಿ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡು ಡೋಸ್‌ಗಳನ್ನೂ ಪಡೆದುಕೊಂಡಿರುವವರಿಗೆ ಮುನ್ನೆಚ್ಚರಿಕೆ ಡೋಸ್ ಆಗಿ ಕೊರ್ಬೆವ್ಯಾಕ್ಸ್ ನೀಡುವುದಕ್ಕೆ ಕೇಂದ್ರ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ’ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

ಕೋವಿಡ್-೧೯ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿಯು (ಎನ್ಟಿಎಜಿಐ) ಕೋರ್ಬೆವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಶಿಫಾರಸು ಮಾಡಿತ್ತು. ಇದರ ಆಧಾರದಲ್ಲಿ ಆರೋಗ್ಯ ಸಚಿವಾಲಯ ಅನುಮತಿ ನೀಡಿದೆ.

ಕೊರ್ಬೆವ್ಯಾಕ್ಸ್ ಲಸಿಕೆಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾಗಿದ್ದು, ಕೋವಿಡ್-೧೯ ರೋಗ ನಿರೋಧಕ ಕಾರ್ಯಕ್ರಮದಡಿ ಸದ್ಯ ೧೨ ರಿಂದ ೧೪ ವರ್ಷದ ಮಕ್ಕಳಿಗೆ ಇದನ್ನು ನೀಡಲಾಗುತ್ತಿದೆ.

‘ಕೊವ್ಯಾಕ್ಸಿನ್ ಅಥವಾ ಕೋವಿಶೀಲ್ಡ್ ಪಡೆದಿದ್ದವರಿಗೆ ಪ್ರಾಯೋಗಿಕವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಿದ್ದಾಗ ಅವರ ದೇಹದಲ್ಲಿ ಗಮನಾರ್ಹ ಪ್ರಮಾಣದಲ್ಲಿ ಪ್ರತಿಕಾಯಗಳು ವೃದ್ಧಿಯಾಗಿದ್ದನ್ನು ಕೋವಿಡ್-೧೯ ಕಾರ್ಯಪಡೆ ಗಮನಿಸಿತ್ತು. ಈ ಲಸಿಕೆಯನ್ನು ಮುನ್ನೆಚ್ಚರಿಕೆ ಡೋಸ್ ಆಗಿ ನೀಡಲು ಭಾರತೀಯ ಔಷಧ ನಿಯಂತ್ರಣ ಮಹಾನಿರ್ದೇಶನಾಲಯ (ಡಿಸಿಜಿಐ) ಜೂನ್ ೪ರಂದೇ ಒಪ್ಪಿಗೆ ನೀಡಿತ್ತು’ ಎಂದೂ ಮೂಲಗಳು ಮಾಹಿತಿ ನೀಡಿವೆ.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

32 mins ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

46 mins ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

52 mins ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

2 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

11 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

11 hours ago