ದೇಶ- ವಿದೇಶ

ಕೊರೋನಾ ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ, ಥಾಯ್ಲೆಂಡ್ ನಿಂದ್ ಬರುವವರಿಗಾಗಿ ಶನಿವಾರ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಯಲ್ಲಿ, ಹೈರಿಸ್ಕ್ ಇರುವ ರಾಷ್ಟ್ರಗಳಿಂದ ಬರುವವರು ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ರಾಷ್ಟ್ರಗಳಿಂಗ ಬರುವವರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡಬಹುದಾಗಿದೆ. ಇವರಲ್ಲಿ ರೋಗ ಲಕ್ಷಣ ಕಂಡು ಬಂದರೆ ಅಥವಾ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದೇ ಆದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಅವರ ಸಿಟಿ ವ್ಯಾಲ್ಯೂ ಶೇ.25ಕ್ಕಿಂತ ಕಡಿಮೆ ಇದ್ದರೆ ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು. ಆಸ್ಪತ್ರೆಗೆ ದಾಖಲಿಸುವಾಗ ಬೆಂಗಳೂರಿನಲ್ಲಿ ಬೌರಿಂಗ್ ಅಥವಾ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಬೇಕು. ರೋಗ ಲಕ್ಷಣಗಳಿಲ್ಲದವರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಗೊಳಗಾಗಬೇಕು ಎಂದು ಸೂಚಿಸಿದೆ.

andolana

Recent Posts

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

9 hours ago

ಮೈಸೂರು–ಜಲ್ಪೈಗುಡಿ ನಡುವೆ ವಿಶೇಷ ರೈಲು ಸಂಚಾರ

ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್‌ ನಡುವೆ ವಿಶೇಷ ಎಕ್ಸ್‌ಪ್ರೆಸ್…

10 hours ago

ಯಮುನಾ ನದಿಯಲ್ಲಿ ಮುಳುಗಿದ ಪ್ರವಾಸಿಗರ ದೋಣಿ ; 6 ಮಂದಿ ಸಾವು, ಹಲವರು ನಾಪತ್ತೆ

ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…

10 hours ago

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

11 hours ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

11 hours ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

13 hours ago