ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.
ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ, ಥಾಯ್ಲೆಂಡ್ ನಿಂದ್ ಬರುವವರಿಗಾಗಿ ಶನಿವಾರ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಮಾರ್ಗಸೂಚಿಯಲ್ಲಿ, ಹೈರಿಸ್ಕ್ ಇರುವ ರಾಷ್ಟ್ರಗಳಿಂದ ಬರುವವರು ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಈ ರಾಷ್ಟ್ರಗಳಿಂಗ ಬರುವವರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡಬಹುದಾಗಿದೆ. ಇವರಲ್ಲಿ ರೋಗ ಲಕ್ಷಣ ಕಂಡು ಬಂದರೆ ಅಥವಾ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದೇ ಆದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಅವರ ಸಿಟಿ ವ್ಯಾಲ್ಯೂ ಶೇ.25ಕ್ಕಿಂತ ಕಡಿಮೆ ಇದ್ದರೆ ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು. ಆಸ್ಪತ್ರೆಗೆ ದಾಖಲಿಸುವಾಗ ಬೆಂಗಳೂರಿನಲ್ಲಿ ಬೌರಿಂಗ್ ಅಥವಾ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಬೇಕು. ರೋಗ ಲಕ್ಷಣಗಳಿಲ್ಲದವರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಗೊಳಗಾಗಬೇಕು ಎಂದು ಸೂಚಿಸಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…