ದೇಶ- ವಿದೇಶ

ಕೊರೋನಾ ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕು ಆರ್ಭಟಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ವಿದೇಶಗಳಿಂದ ರಾಜ್ಯಕ್ಕೆ ಬರುವವರ ಮೇಲೆ ಸರ್ಕಾರ ನಿಗಾ ಮುಂದುವರೆಸಿದೆ. ಇದರಂತೆ ಹೈರಿಸ್ಕ್ ರಾಷ್ಟ್ರಗಳಿಂಗ ಬರುವ ರೋಗಲಕ್ಷಣಗಳು ಇಲ್ಲದವರೂ ಕೂಡ ಇನ್ನು ಮುಂದೆ 7 ದಿನಗಳ ಕಾಲ ಹೋಂ ಕ್ವಾರಂಟೈನ್ ನಲ್ಲಿರುವುದನ್ನು ಕಡ್ಡಾಗೊಳಿಸಿದೆ.

ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ, ಥಾಯ್ಲೆಂಡ್ ನಿಂದ್ ಬರುವವರಿಗಾಗಿ ಶನಿವಾರ ಪರಿಷ್ಕೃತ ಮಾರ್ಗಸೂಚಿಯನ್ನು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.

ಮಾರ್ಗಸೂಚಿಯಲ್ಲಿ, ಹೈರಿಸ್ಕ್ ಇರುವ ರಾಷ್ಟ್ರಗಳಿಂದ ಬರುವವರು ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಮಾತ್ರ ವಿಮಾನ ನಿಲ್ದಾಣದಿಂದ ಹೊರ ಹೋಗಲು ಅವಕಾಶ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

ಈ ರಾಷ್ಟ್ರಗಳಿಂಗ ಬರುವವರು 72 ಗಂಟೆಗಳಿಗಿಂತ ಹಳೆಯದಲ್ಲದ ಆರ್’ಟಿ-ಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ನೀಡಿದರೆ ಅವರಿಗೆ ವಿಮಾನ ನಿಲ್ದಾಣದಿಂದ ಹೊರಹೋಗಲು ಅವಕಾಶ ನೀಡಬಹುದಾಗಿದೆ. ಇವರಲ್ಲಿ ರೋಗ ಲಕ್ಷಣ ಕಂಡು ಬಂದರೆ ಅಥವಾ ಪರೀಕ್ಷೆ ವೇಳೆ ಸೋಂಕು ದೃಢಪಟ್ಟಿದ್ದೇ ಆದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕು. ಅವರ ಸಿಟಿ ವ್ಯಾಲ್ಯೂ ಶೇ.25ಕ್ಕಿಂತ ಕಡಿಮೆ ಇದ್ದರೆ ವಂಶವಾಹಿ ಪರೀಕ್ಷೆಗೆ ಒಳಪಡಿಸಬೇಕು. ಆಸ್ಪತ್ರೆಗೆ ದಾಖಲಿಸುವಾಗ ಬೆಂಗಳೂರಿನಲ್ಲಿ ಬೌರಿಂಗ್ ಅಥವಾ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆಗೆ ದಾಖಲು ಮಾಡಬೇಕು. ರೋಗ ಲಕ್ಷಣಗಳಿಲ್ಲದವರು 7 ದಿನಗಳ ಕಾಲ ಹೋಂ ಕ್ವಾರಂಟೈನ್ ಗೊಳಗಾಗಬೇಕು ಎಂದು ಸೂಚಿಸಿದೆ.

andolana

Recent Posts

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

47 mins ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

50 mins ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

53 mins ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

55 mins ago

ಕೆರೆ ನೀರಿಗಾಗಿ ಎರಡು ಗ್ರಾಮಸ್ಥರ ತಿಕ್ಕಾಟ!

ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ  ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…

1 hour ago

ಅಪಾಯಕಾರಿ ರೈಲ್ವೆ ಅಂಡರ್‌ಪಾಸ್ ಫುಟ್‌ಪಾತ್

ಹೇಮಂತ್‌ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…

1 hour ago