ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ನ ಮತ್ತೊಂದು ಉಲ್ಬಣವನ್ನು ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಸೇರಿದಂತೆ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು. ಇದು ದೇಶದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿಯಾಗಬಹುದು ಎಂಬ ಮುನ್ಸೂಚನೆ ನೀಡುತ್ತಿರುವಂತಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೇರುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದನ್ನು ಒಳಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆ ನಿರ್ಧರಿಸಿದೆ.
ಇದೇ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದ ಶೇ.100ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ನಾವು ವಿಮಾನ ನಿಲ್ದಾಣದಲ್ಲಿ ಮೇಲ್ವಿಚಾರಣೆ ಮಾಡುತ್ತೇವೆ. ಮತ್ತು ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು INSACOG ಗೆ ಕಳುಹಿಸಲು ಪ್ರಯತ್ನಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…