ದೇಶ- ವಿದೇಶ

ಚೀನಾದಲ್ಲಿ ಕೊರೋನಾ ಅಬ್ಬರ: ಭಾರತದಲ್ಲಿ ಮತ್ತೆ ಮಾಸ್ಕ್ ಜಾರಿ ಸಂಭವ

ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ನ ಮತ್ತೊಂದು ಉಲ್ಬಣವನ್ನು ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಸೇರಿದಂತೆ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು. ಇದು ದೇಶದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿಯಾಗಬಹುದು ಎಂಬ ಮುನ್ಸೂಚನೆ ನೀಡುತ್ತಿರುವಂತಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೇರುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದನ್ನು ಒಳಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆ ನಿರ್ಧರಿಸಿದೆ.
ಇದೇ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದ ಶೇ.100ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ನಾವು ವಿಮಾನ ನಿಲ್ದಾಣದಲ್ಲಿ ಮೇಲ್ವಿಚಾರಣೆ ಮಾಡುತ್ತೇವೆ. ಮತ್ತು ಕೋವಿಡ್‌ ಪಾಸಿಟಿವ್ ಪ್ರಕರಣಗಳನ್ನು INSACOG ಗೆ ಕಳುಹಿಸಲು ಪ್ರಯತ್ನಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

2 hours ago

911 ಅಕ್ರಮ ವಿದೇಶಿ ನುಸುಳುಕೋರರು ಪತ್ತೆ : ಗೃಹ ಸಚಿವ ಖರ್ಗೆ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…

15 hours ago

ಕಾವೇರಿ ವನ್ಯಧಾಮದಲ್ಲಿ 8 ಕಳ್ಳಬೇಟೆ ಶಿಬಿರ ಧ್ವಂಸ : ಎಫ್‌ಐಆರ್ ದಾಖಲು, ತನಿಖೆ ಚುರುಕು

ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…

15 hours ago

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

17 hours ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

17 hours ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

21 hours ago