ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ನ ಮತ್ತೊಂದು ಉಲ್ಬಣವನ್ನು ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಸೇರಿದಂತೆ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು. ಇದು ದೇಶದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿಯಾಗಬಹುದು ಎಂಬ ಮುನ್ಸೂಚನೆ ನೀಡುತ್ತಿರುವಂತಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೇರುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದನ್ನು ಒಳಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆ ನಿರ್ಧರಿಸಿದೆ.
ಇದೇ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದ ಶೇ.100ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ನಾವು ವಿಮಾನ ನಿಲ್ದಾಣದಲ್ಲಿ ಮೇಲ್ವಿಚಾರಣೆ ಮಾಡುತ್ತೇವೆ. ಮತ್ತು ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು INSACOG ಗೆ ಕಳುಹಿಸಲು ಪ್ರಯತ್ನಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…