ದೇಶ- ವಿದೇಶ

ಚೀನಾದಲ್ಲಿ ಕೊರೋನಾ ಅಬ್ಬರ: ಭಾರತದಲ್ಲಿ ಮತ್ತೆ ಮಾಸ್ಕ್ ಜಾರಿ ಸಂಭವ

ಹೊಸದಿಲ್ಲಿ: ಚೀನಾದಲ್ಲಿ ಕೊರೋನಾ ಪ್ರಕರಣಗಳು ಉಲ್ಬಣಿಸುತ್ತಿದ್ದು ಭಾರತ ಸೇರಿದಂತೆ ವಿಶ್ವಕ್ಕೆ ಮತ್ತೆ ಆತಂಕದ ಕ್ಷಣಗಳನ್ನು ತಂದೊಡ್ಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವಿಯಾ ಅವರು ಬುಧವಾರ ಆರೋಗ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಪರಿಶೀಲನಾ ಸಭೆ ನಡೆಸಿದ್ದಾರೆ. ದೇಶದಲ್ಲಿ ಕೋವಿಡ್ನ ಮತ್ತೊಂದು ಉಲ್ಬಣವನ್ನು ತಡೆಗಟ್ಟುವ ಕಾರ್ಯತಂತ್ರವನ್ನು ರೂಪಿಸಲು ಈ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಭೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯ ಸೇರಿದಂತೆ, ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರೂ ಮಾಸ್ಕ್ ಧರಿಸಿದ್ದು ವಿಶೇಷವಾಗಿತ್ತು. ಇದು ದೇಶದಲ್ಲಿ ಮತ್ತೆ ಕೋವಿಡ್ ಮಾರ್ಗಸೂಚಿ ಜಾರಿಯಾಗಬಹುದು ಎಂಬ ಮುನ್ಸೂಚನೆ ನೀಡುತ್ತಿರುವಂತಿದೆ.
ಸಭೆಯಲ್ಲಿ ಪ್ರಾಥಮಿಕವಾಗಿ ಆರು ಪ್ರಮುಖ ಅಂಶಗಳ ಮೇಲೆ ಚರ್ಚೆಗಳು ನಡೆದಿದೆ ಎನ್ನಲಾಗಿದ್ದು, ಅಂತಾರಾಷ್ಟ್ರೀಯ ಮತ್ತು ದೇಶೀಯ ವಿಮಾನ ನಿಲ್ದಾಣಗಳಲ್ಲಿ ಒಳಬರುವ ಪ್ರಕರಣಗಳನ್ನು ನಿರ್ಬಂಧಿಸುವ ತಂತ್ರ, ವಿದೇಶದಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಹೇರುವುದು ಮತ್ತು ಕೋವಿಡ್ನ ಹೊಸ ರೂಪಾಂತರದ ಕುರಿತು ತಜ್ಞರೊಂದಿಗೆ ಸಮಾಲೋಚನೆಯನ್ನು ನಡೆಸುವುದನ್ನು ಒಳಗೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.
ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ಗಳಿಗೆ ಪ್ರತಿದಿನ ಕಳುಹಿಸಬೇಕು ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕುರಿತು ಸಭೆ ನಿರ್ಧರಿಸಿದೆ.
ಇದೇ ವಿಚಾರವಾಗಿ ಮಾತನಾಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ದೇಶದ ಶೇ.100ರಷ್ಟು ಜನಸಂಖ್ಯೆಯು ಎರಡು ಡೋಸ್ ಲಸಿಕೆಯನ್ನು ತೆಗೆದುಕೊಂಡಿದೆ. ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಜನರಿಗೆ ಮನವಿ ಮಾಡುತ್ತೇನೆ. ನಾವು ವಿಮಾನ ನಿಲ್ದಾಣದಲ್ಲಿ ಮೇಲ್ವಿಚಾರಣೆ ಮಾಡುತ್ತೇವೆ. ಮತ್ತು ಕೋವಿಡ್‌ ಪಾಸಿಟಿವ್ ಪ್ರಕರಣಗಳನ್ನು INSACOG ಗೆ ಕಳುಹಿಸಲು ಪ್ರಯತ್ನಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

16 mins ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

41 mins ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

59 mins ago

ಹನೂರು| ಸಚಿವರನ್ನೇ ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ಕಾರ್ಯಕರ್ತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ…

1 hour ago

ಕಾಡಾನೆ ದಾಳಿಗೆ ನಾಶವಾದ ತೆಂಗು, ಮುಸುಕಿನ ಜೋಳ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಕಾಡಾನೆ ದಾಳಿಗೆ ತೆಂಗು ಹಾಗೂ ಮುಸುಕಿನ ಜೋಳದ ಬೆಳೆ ನಾಶವಾಗಿರುವ ಘಟನೆ…

2 hours ago

ರಾಜ್ಯಕ್ಕೂ ಬಂತು ಎಸ್‌ಐಆರ್‌ ; ಜೂನ್‌ನಿಂದ ಆರಂಭ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು…

3 hours ago