ದೇಶ- ವಿದೇಶ

ಕಾಲ್ತುಳಿತ ಪ್ರಕರಣ: ನಟ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಕೊಟ್ಟ ನ್ಯಾಯಾಲಯ

ಹೈದರಾಬಾದ್: ಪುಷ್ಪ-2 ಕಾಲ್ತುಳಿತ ಪ್ರಕರಣದಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದೆ.

ಸ್ಥಳೀಯ ನ್ಯಾಯಾಲಯವೊಂದು ಅವರ ಜಾಮೀನಿನ ಷರತ್ತನ್ನು ಸಡಿಲಗೊಳಿಸಿದ್ದು, ಪ್ರತಿ ಭಾನುವಾರ ತನಿಖಾಧಿಕಾರಿ ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡಿದೆ. ಈ ಮೂಲಕ ಅಲ್ಲು ಅರ್ಜುನ್‌ಗೆ ಬಿಗ್‌ ರಿಲೀಫ್‌ ಸಿಕ್ಕಿದಂತಾಗಿದೆ.

ಅಗತ್ಯವಿದ್ದಾಗ ಚಿಕ್ಕಡಪಲ್ಲಿ ಪೊಲೀಸ್‌ ಠಾಣೆಯ ಎಸ್‌ಎಚ್‌ಓ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ನಿರ್ದಿಷ್ಟ ದೇಶಗಳಿಗೆ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅನುಮತಿ ನೀಡಿದೆ.

ಪ್ರತಿ ಟ್ರಿಪ್‌ಗೆ ಅವರ ಪ್ರಯಾಣದ ವೇಳಾಪಟ್ಟಿಯನ್ನು ಎಸ್‌ಎಚ್‌ಓಗೆ ತಿಳಿಸಲು ಮತ್ತು ಚಾರ್ಜ್‌ಶೀಟ್‌ ಸಲ್ಲಿಸುವವರೆಗೆ ವಿದೇಶದಲ್ಲಿ ಅವರು ತಂಗಿರುವ ಸ್ಥಳದ ವಿವರಗಳನ್ನು ಒದಗಿಸುವಂತೆ ನಿರ್ದೇಶಿಸಲಾಗಿದೆ. ಉಳಿದ ಜಾಮೀನು ಷರತ್ತುಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದೆ.

ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ನಟ ಅಲ್ಲು ಅರ್ಜುನ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಜನವರಿ.3ರಂದು ಅಲ್ಲು ಅರ್ಜುನ್‌ಗೆ ನಿಯಮಿತ ಜಾಮೀನು ನೀಡುವಾಗ ಪ್ರತಿ ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರ ನಡುವೆ ಎರಡು ತಿಂಗಳವರೆಗೆ ಅಥವಾ ಚಾರ್ಜ್‌ಶೀಟ್‌ ಸಲ್ಲಿಕೆಯಾಗುವವರೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿತ್ತು.

ಕೋರ್ಟ್‌ ಅನುಮತಿ ಪಡೆಯದೇ ದೇಶ ತೊರೆಯದಂತೆ ನಿರ್ಬಂಧಿಸಿತ್ತು. ಅಲ್ಲದೇ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಯಲ್ಲಿ ಮಧ್ಯ ಪ್ರವೇಶಿಸುವುದು ಅಥವಾ ಯಾವುದೇ ರೀತಿಯಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದನ್ನು ತಡೆಯುವಂತೆ ನ್ಯಾಯಾಲಯ ನಿರ್ದೇಶಿಸಿತ್ತು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago