ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.
ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.
ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.
ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…