ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.
ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.
ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.
ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…