ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.
ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.
ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.
ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…