ದೇಶ- ವಿದೇಶ

ಕೋವಿಡ್‌ನಿಂದ ಭಾರತೀಯರ ಆಯಸ್ಸು 2.6 ವರ್ಷ ಕಡಿತ.? ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದಿಷ್ಟು

ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.

ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್‌ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೊರೊನಾ ವೈರಸ್‌ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.

ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.

ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

6 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago