ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.
ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಕೊರೊನಾ ವೈರಸ್ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.
ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.
ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…