ದೇಶ- ವಿದೇಶ

ಕೋವಿಡ್‌ನಿಂದ ಭಾರತೀಯರ ಆಯಸ್ಸು 2.6 ವರ್ಷ ಕಡಿತ.? ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದಿಷ್ಟು

ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.

ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್‌ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೊರೊನಾ ವೈರಸ್‌ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.

ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.

ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago