ದೇಶ- ವಿದೇಶ

ಕೋವಿಡ್‌ನಿಂದ ಭಾರತೀಯರ ಆಯಸ್ಸು 2.6 ವರ್ಷ ಕಡಿತ.? ಕೇಂದ್ರ ಆರೋಗ್ಯ ಇಲಾಖೆ ಹೇಳಿದ್ದಿಷ್ಟು

ನವದೆಹಲಿ: ಕೊರೊನಾ ಮಹಾಮಾರಿ ವಕ್ಕರಿಸಿದ ಬಳಿಕ ಭಾರತೀಯರ ಆಯಸ್ಸು 2.6 ವರ್ಷ ಕಡಿತಗೊಂಡಿದೆ ಎಂಬ ಅಧ್ಯಯನ ವರದಿ ಭಾರೀ ಆತಂಕ ಸೃಷ್ಟಿಸಿದೆ.

ಈ ಅಧ್ಯಯನ ವರದಿ ಬೆನ್ನಲ್ಲೇ ದೇಶದ ಜನತೆ ಭಾರೀ ಆತಂಕಕ್ಕೆ ಈಡಾಗಿದ್ದರು. ವರದಿ ಬರುವುದಕ್ಕೂ ಮೊದಲೇ ಭಾರತದಲ್ಲಿ ಸಾಕಷ್ಟು ದಿಢೀರ್‌ ಸಾವಿನ ಪ್ರಕರಣಗಳು ದಾಖಲಾಗುತ್ತಿದ್ದವು. ಈ ಎಲ್ಲಾ ಬೆಳವಣಿಗೆಗಳ ನಡುವೆ ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೊರೊನಾ ವೈರಸ್‌ ಮಹಾಮಾರಿ ವಿಶ್ವದಾದ್ಯಂತ ಸೃಷ್ಟಿಸಿದ ಅವಾಂತರಗಳು ಬಹಳಷ್ಟು. ಕೊರೊನಾ ಆರ್ಭಟಕ್ಕೆ ದೇಶದಾದ್ಯಂತ ಸಾವಿರಾರು ಜನರು ಮೃತಪಟ್ಟಿದ್ದು, ಅನೇಕ ಮಕ್ಕಳು ಅನಾಥರಾಗಿದ್ದಾರೆ.

ಇದರ ನಡುವೆ ಕೊರೊನಾ ವಕ್ಕರಿಸಿದ ಜನರಿಗೆ 2.6 ವರ್ಷ ಆಯಸ್ಸು ಕಡಿಮೆ ಎಂದು ಅಧ್ಯಯನವೊಂದು ಸ್ಫೋಟಕ ಮಾಹಿತಿ ನೀಡಿದೆ. ಈ ವರದಿಗೆ ಕೇಂದ್ರ ಆರೋಗ್ಯ ಇಲಾಖೆ ಪ್ರತಿಕ್ರಿಯೆ ನೀಡಿದ್ದು, ಅಧ್ಯಯನದ ವರದಿಯನ್ನು ಅಲ್ಲಗೆಳೆದಿದೆ.

ಈ ವರದಿ ಭಾರತವನ್ನು ಪ್ರತಿನಿಧಿಸುವುದಿಲ್ಲ. ಭಾರತದ ಜನಸಂಖ್ಯೆ, ಆರೋಗ್ಯ, ಕೊರೊನಾ ಪ್ರಕರಣ ಸೇರಿದಂತೆ ಹಲವು ಮಾಹಿತಿಗಳನ್ನು ಆಧರಿಸಿ ಈ ವರದಿ ತಯಾರಾಗಿಲ್ಲ. ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

2 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

3 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

3 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

3 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

12 hours ago