ದೇಶ- ವಿದೇಶ

ಮೊದಲ ಅಲೆಯ ಕೋವಿಡ್‌ ಸೋಂಕಿತರಲ್ಲಿ ಹೃದಯಾಘಾತದ ಅಪಾಯ ಹೆಚ್ಚು: ಅಧ್ಯಯನ ವರದಿ ಬಹಿರಂಗ

ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್‌ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್‌ ಶಾಕ್‌ ನೀಡಿದೆ.

ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್‌ ವೈರಸ್‌, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ.

ಹೊಸ ಅಧ್ಯಯನದ ವರದಿ ಪ್ರಕಾರ ಕೋವಿಡ್‌ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಕೋವಿಡ್‌ ಸೋಂಕಿಗೆ ಒಳಗಾದವರಿಗೆ ಹೋಲಿಸಿದರೆ ಹೃದಯಾಘಾತ, ಸ್ಟ್ರೋಕ್‌ ಮತ್ತು ಮರಣವನ್ನು ಅನುಭವಿಸುವ ಸಾಧ್ಯತೆಯಿದೆ.

ಇದಲ್ಲದೇ ವೈರಸ್‌ನಿಂದ ಆಸ್ಪತ್ರೆಗೆ ದಾಖಲಾದವರಿಗೆ ಅಪಾಯವು ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ ಎಂದು ವರದಿ ಬಿಗ್‌ ಶಾಕ್‌ ನೀಡಿದೆ.

ಇನ್ನು ಸಂಶೋಧನೆಗಳ ಪ್ರಕಾರ ನಿರ್ದಿಷ್ಟವಾಗಿ ವಿಭಿನ್ನ ರಕ್ತದ ಪ್ರಕಾರಗಳಿಗೆ ಸಂಬಂಧಿಸಿದ ಅಪಾಯಗಳನ್ನು ಒತ್ತಿ ಒತ್ತಿ ಹೇಳುತ್ತಿದೆ.

ಎ, ಬಿ ಮತ್ತು ಎಬಿ ರಕ್ತದ ಪ್ರಕಾರಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹೃದಯಾಘಾತದ ಅಪಾಯ ಹೆಚ್ಚು ಎಂದು ವರದಿಯೊಂದು ಆತಂಕಕ್ಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜನತೆ ಭಾರೀ ಭಯಭೀತರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

23 mins ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

1 hour ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

2 hours ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

2 hours ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

3 hours ago