ದೇಶ- ವಿದೇಶ

ಮೊದಲ ಅಲೆಯ ಕೋವಿಡ್‌ ಸೋಂಕಿತರಲ್ಲಿ ಹೃದಯಾಘಾತದ ಅಪಾಯ ಹೆಚ್ಚು: ಅಧ್ಯಯನ ವರದಿ ಬಹಿರಂಗ

ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್‌ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್‌ ಶಾಕ್‌ ನೀಡಿದೆ.

ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್‌ ವೈರಸ್‌, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ.

ಹೊಸ ಅಧ್ಯಯನದ ವರದಿ ಪ್ರಕಾರ ಕೋವಿಡ್‌ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಕೋವಿಡ್‌ ಸೋಂಕಿಗೆ ಒಳಗಾದವರಿಗೆ ಹೋಲಿಸಿದರೆ ಹೃದಯಾಘಾತ, ಸ್ಟ್ರೋಕ್‌ ಮತ್ತು ಮರಣವನ್ನು ಅನುಭವಿಸುವ ಸಾಧ್ಯತೆಯಿದೆ.

ಇದಲ್ಲದೇ ವೈರಸ್‌ನಿಂದ ಆಸ್ಪತ್ರೆಗೆ ದಾಖಲಾದವರಿಗೆ ಅಪಾಯವು ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ ಎಂದು ವರದಿ ಬಿಗ್‌ ಶಾಕ್‌ ನೀಡಿದೆ.

ಇನ್ನು ಸಂಶೋಧನೆಗಳ ಪ್ರಕಾರ ನಿರ್ದಿಷ್ಟವಾಗಿ ವಿಭಿನ್ನ ರಕ್ತದ ಪ್ರಕಾರಗಳಿಗೆ ಸಂಬಂಧಿಸಿದ ಅಪಾಯಗಳನ್ನು ಒತ್ತಿ ಒತ್ತಿ ಹೇಳುತ್ತಿದೆ.

ಎ, ಬಿ ಮತ್ತು ಎಬಿ ರಕ್ತದ ಪ್ರಕಾರಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹೃದಯಾಘಾತದ ಅಪಾಯ ಹೆಚ್ಚು ಎಂದು ವರದಿಯೊಂದು ಆತಂಕಕ್ಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜನತೆ ಭಾರೀ ಭಯಭೀತರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

2026ರ ಮೈಸೂರು ದಸರಾಗೆ ಡಿಜಿಟಲ್ ಸ್ಪರ್ಶ!

ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…

3 mins ago

ಮಡಿಕೇರಿ ದಸರಾ ಶೋಭಾಯಾತ್ರೆ ದಿನಾಂಕ ಗೊಂದಲ

ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…

9 mins ago

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

17 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago