ದೇಶ- ವಿದೇಶ

ಮೊದಲ ಅಲೆಯ ಕೋವಿಡ್‌ ಸೋಂಕಿತರಲ್ಲಿ ಹೃದಯಾಘಾತದ ಅಪಾಯ ಹೆಚ್ಚು: ಅಧ್ಯಯನ ವರದಿ ಬಹಿರಂಗ

ನವದೆಹಲಿ: ಇಡೀ ಜಗತ್ತನ್ನೇ ಬೆಚ್ಚಿ ಬೀಳಿಸಿದ್ದ ಮಹಾಮಾರಿ ಕೋವಿಡ್‌ ಆತಂಕ ಇನ್ನೂ ಕಡಿಮೆಯಾಗಿಲ್ಲ. ಹೀಗಿರುವಾಗಲೇ ಇದೀಗ ಜನತೆಗೆ ಅಧ್ಯಯನ ವರದಿಯೊಂದು ಬಿಗ್‌ ಶಾಕ್‌ ನೀಡಿದೆ.

ಅನೇಕ ರೀತಿಯಲ್ಲಿ ಮನುಷ್ಯರನ್ನು ಕಾಡುತ್ತಲೇ ಬಂದಿರುವ ಕೋವಿಡ್‌ ವೈರಸ್‌, ಇದೀಗ ಹೃದಯಾಘಾತದ ರೂಪದಲ್ಲಿ ಭೀತಿ ಹೆಚ್ಚಿಸಿದೆ.

ಹೊಸ ಅಧ್ಯಯನದ ವರದಿ ಪ್ರಕಾರ ಕೋವಿಡ್‌ ಸಾಂಕ್ರಾಮಿಕ ರೋಗದ ಆರಂಭಿಕ ಅಂದರೆ ಮೊದಲ ಅಲೆಯಲ್ಲಿ ತೀವ್ರವಾದ ಕೋವಿಡ್‌-19 ಸೋಂಕಿಗೆ ಒಳಗಾಗಿದ್ದ ವ್ಯಕ್ತಿಗಳು ಹೃದಯಾಘಾತಕ್ಕೆ ಒಳಗಾಗುವ ಅಪಾಯ ಹೆಚ್ಚಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಕೋವಿಡ್‌ ಸೋಂಕಿಗೆ ಒಳಗಾದವರಿಗೆ ಹೋಲಿಸಿದರೆ ಹೃದಯಾಘಾತ, ಸ್ಟ್ರೋಕ್‌ ಮತ್ತು ಮರಣವನ್ನು ಅನುಭವಿಸುವ ಸಾಧ್ಯತೆಯಿದೆ.

ಇದಲ್ಲದೇ ವೈರಸ್‌ನಿಂದ ಆಸ್ಪತ್ರೆಗೆ ದಾಖಲಾದವರಿಗೆ ಅಪಾಯವು ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ ಎಂದು ವರದಿ ಬಿಗ್‌ ಶಾಕ್‌ ನೀಡಿದೆ.

ಇನ್ನು ಸಂಶೋಧನೆಗಳ ಪ್ರಕಾರ ನಿರ್ದಿಷ್ಟವಾಗಿ ವಿಭಿನ್ನ ರಕ್ತದ ಪ್ರಕಾರಗಳಿಗೆ ಸಂಬಂಧಿಸಿದ ಅಪಾಯಗಳನ್ನು ಒತ್ತಿ ಒತ್ತಿ ಹೇಳುತ್ತಿದೆ.

ಎ, ಬಿ ಮತ್ತು ಎಬಿ ರಕ್ತದ ಪ್ರಕಾರಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಹೃದಯಾಘಾತದ ಅಪಾಯ ಹೆಚ್ಚು ಎಂದು ವರದಿಯೊಂದು ಆತಂಕಕ್ಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದು, ಜನತೆ ಭಾರೀ ಭಯಭೀತರಾಗಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago