ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.
ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಸಂಬಂಧ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಒತ್ತಾಯ ಪೂರ್ವಕವಾಗಿ ಈ ಮೂರು ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಗಿದೆ. ಇದು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ಬುಲ್ಡೋಜರ್ ನ್ಯಾಯ ಎಂದು ಟೀಕಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ, ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದೀಯ ವ್ಯವಸ್ಥೆಯಲ್ಲಿ ಈ ಬುಲ್ಡೋಜರ್ ನ್ಯಾಯ ಮೇಲುಗೈ ಸಾಧಿಸಲು ಇಂಡಿಯಾ ಬಣ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…