ನವದೆಹಲಿ: ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಹೊಸ ಕಾನೂನುಗಳನ್ನು ಒತ್ತಾಯ ಪೂರ್ವಕವಾಗಿ ಅಂಗೀಕರಿಸಲಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ ಮಾಡಿದ್ದಾರೆ.
ದೇಶದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಇಂದಿನಿಂದ ಜಾರಿಗೆ ಬಂದಿವೆ. ಈ ಸಂಬಂಧ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡುವ ಮೂಲಕ ಒತ್ತಾಯ ಪೂರ್ವಕವಾಗಿ ಈ ಮೂರು ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಗಿದೆ. ಇದು ದೇಶದಲ್ಲಿ ಸಂಸದೀಯ ವ್ಯವಸ್ಥೆಯನ್ನು ನಾಶಪಡಿಸುವ ಬುಲ್ಡೋಜರ್ ನ್ಯಾಯ ಎಂದು ಟೀಕಿಸಿದ್ದಾರೆ.
ಚುನಾವಣೆಯಲ್ಲಿ ರಾಜಕೀಯ ಮತ್ತು ನೈತಿಕ ಆಘಾತ ಅನುಭವಿಸಿದ ಬಳಿಕ ಮೋದಿ ಜೀ ಮತ್ತು ಬಿಜೆಪಿ ಸಂವಿಧಾನವನ್ನು ಗೌರವಿಸುವ ರೀತಿ ನಾಟಕ ಮಾಡುತ್ತಿದ್ದಾರೆ. ಸತ್ಯವೇನೆಂದರೆ, ಇಂದು ಜಾರಿಗೆ ಬರುತ್ತಿರುವ ಮೂರು ಕ್ರಿಮಿನಲ್ ಅಪರಾಧ ಕಾನೂನುಗಳು ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತು ಮಾಡಿ, ಒತ್ತಾಯಪೂರ್ವಕವಾಗಿ ಜಾರಿಗೆ ತಂದವುಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಸದೀಯ ವ್ಯವಸ್ಥೆಯಲ್ಲಿ ಈ ಬುಲ್ಡೋಜರ್ ನ್ಯಾಯ ಮೇಲುಗೈ ಸಾಧಿಸಲು ಇಂಡಿಯಾ ಬಣ ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…