ನವದೆಹಲಿ: ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ತನಿಖೆಗೆ ಆದೇಶ ನೀಡಲಾಗಿದೆ.
ಈ ಕುರಿತು ರಾಜ್ಯಸಭೆ ಸಭಾಪತಿ ಜಗದೀಪ್ ಧನಕರ್ ಅವರು ಆದೇಶ ಹೊರಡಿಸಿದ್ದಾರೆ.
ನಿನ್ನೆ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.
ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶ ನೀಡಲಾಗಿದೆ ಎಂದು ಜಗದೀಪ್ ಧನಕರ್ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿದ ಜಗದೀಪ್ ಧನಕರ್ ಅವರು, ಈ ಬಗ್ಗೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದ ಬಂದಿಲ್ಲ ಎಂದು ಹೇಳಿದ್ದಾರೆ.
ಇನ್ನು ರಾಜ್ಯಸಭೆಯಲ್ಲಿ ಸಭಾಪತಿ ಹೇಳಿಕೆ ಗದ್ದಲಕ್ಕೆ ಕಾರಣವಾಗಿದ್ದು, ತನಿಖೆ ಪೂರ್ಣಗೊಳ್ಳದ ಹೊರತು ಸಭಾಪತಿ ಸದಸ್ಯರ ಹೆಸರು ಹೇಳಬಾರದಿತ್ತು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…