ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ ಕರ್ನಾಟಕ್ಕೆ ನೀಡಿದೆ.
ಮಂಗಳವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ-ಸಿಡಬ್ಲ್ಯುಎಂಎ) ಸಭೆಯಲ್ಲಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.
ಮಂಗಳವಾರ ಎರಡೂ ಕಡೆಯ ವಾದವನ್ನು ಆಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂತಿಮವಾಗಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಬಿಡಲು ಆದೇಶಿಸಿತು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…