Mysore
20
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ದಿತ್ವಾ ಚಂಡಮಾರುತದ ಅಬ್ಬರ: ಶ್ರೀಲಂಕಾದಲ್ಲಿ 330ರ ಗಟಿ ದಾಟಿದ ಸಾವಿನ ಸಂಖ್ಯೆ

ಶ್ರೀಲಂಕಾರ: ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮಳೆ ಹಾಗೂ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಂಡಮಾರುತದ ಅಬ್ಬರಕ್ಕೆ ಭಾರೀ ಪ್ರವಾಹ ಉಂಟಾಗಿದ್ದು, 334 ಜನರು ಮೃತಪಟ್ಟಿದ್ದಾರೆ. ಪ್ರವಾಹಕ್ಕೆ ಸಿಲುಕಿ ಹಲವರು ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನು ಓದಿ: ದಿತ್ವಾ ಚಂಡಮಾರುತ : ಶ್ರೀಲಂಕಾಕ್ಕೆ ಭಾರತ ನೆರವು

ಕಲನಿ ನದಿಯಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗುತ್ತಿದ್ದು, ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.

ಚಂಡಮಾರುತದ ಪರಿಣಾಮ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಅಂತರಾಷ್ಟ್ರೀಯ ಸಮುದಾಯಗಳ ನೆರವು ಕೋರಿದ್ದಾರೆ.

ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, 7.8 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿದ್ದಾರೆ. ಮೂಲಸೌಕರ್ಯ ಸಂಪೂರ್ಣ ಹಾನಿಯಾಗಿದೆ.

Tags:
error: Content is protected !!