ಶ್ರೀಲಂಕಾರ: ದಿತ್ವಾ ಚಂಡಮಾರುತ ಶ್ರೀಲಂಕಾದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮಳೆ ಹಾಗೂ ಪ್ರವಾಹದಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಚಂಡಮಾರುತದ ಅಬ್ಬರಕ್ಕೆ ಭಾರೀ ಪ್ರವಾಹ ಉಂಟಾಗಿದ್ದು, 334 ಜನರು ಮೃತಪಟ್ಟಿದ್ದಾರೆ. ಪ್ರವಾಹಕ್ಕೆ ಸಿಲುಕಿ ಹಲವರು ಕೊಚ್ಚಿ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನು ಓದಿ: ದಿತ್ವಾ ಚಂಡಮಾರುತ : ಶ್ರೀಲಂಕಾಕ್ಕೆ ಭಾರತ ನೆರವು
ಕಲನಿ ನದಿಯಲ್ಲಿ ನೀರಿನ ಮಟ್ಟ ಭಾರೀ ಏರಿಕೆಯಾಗುತ್ತಿದ್ದು, ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.
ಚಂಡಮಾರುತದ ಪರಿಣಾಮ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದು, ಅಂತರಾಷ್ಟ್ರೀಯ ಸಮುದಾಯಗಳ ನೆರವು ಕೋರಿದ್ದಾರೆ.
ದೇಶಾದ್ಯಂತ 20 ಸಾವಿರಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, 7.8 ಲಕ್ಷಕ್ಕೂ ಅಧಿಕ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. 1 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ತಾಣಗಳಿಗೆ ಸ್ಥಳಾಂತರಗೊಂಡಿದ್ದಾರೆ. ಮೂಲಸೌಕರ್ಯ ಸಂಪೂರ್ಣ ಹಾನಿಯಾಗಿದೆ.
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…
ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್ಗಳ ರಜಾ…
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…