ಕೊಲಂಬೊ(ಶ್ರೀಲಂಕಾ) : ದಿತ್ವಾ ಚಂಡಮಾರುತದಿಂದ ತೀವ್ರ ಸಂಕಷ್ಟದಲ್ಲಿರುವ ಶ್ರೀಲಂಕಾಕ್ಕೆ ಭಾರತ ಸಹಾಯ ಹಸ್ತ ಚಾಚಿದೆ.
ಭಾರತವು ‘ಆಪರೇಷನ್ ಸಾಗರ್ ಬಂಧು’ ಹೆಸರಿನಲ್ಲಿ ೮೦ ರಾಷ್ಟ್ರೀಯ ವಿಪತ್ತು ಕಾರ್ಯಾಚರಣೆ ಪಡೆ (ಎನ್ಡಿಆರ್ಎಫ್) ಸಿಬ್ಬಂದಿಯನ್ನು ಒಳಗೊಂಡ ಎರಡು ರಕ್ಷಣಾ ತಂಡಗಳನ್ನು ದ್ವೀಪ ರಾಷ್ಟ್ರಕ್ಕೆ ಕಳುಹಿಸಿದೆ. ಭಾರತೀಯರೂ ಸೇರಿದಂತೆ ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣೆಗೆ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ಗಳು ಹೈಬ್ರಿಡ್ ರಕ್ಷಣಾ ಕಾರ್ಯಾಚರಣೆಗಳನ್ನು ಆರಂಭಿಸಿದೆ.
ಇದನ್ನು ಓದಿ: ಖಾಸಗಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿ : ಮಾಧ್ಯಮದವರಿಗೆ ನೋ ಬೈಟ್ ಎಂದ ಸಿಎಂ
ಈ ಕುರಿತು ಭಾರತದ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಶ್ರೀಲಂಕಾದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲು ಎನ್ಡಿಆರ್ಎಫ್ ಸಿಬ್ಬಂದಿ ಅಲ್ಲಿಗೆ ಧಾವಿಸಿದ್ದಾರೆ. ಸ್ಥಳೀಯ ಅಽಕಾರಿಗಳೊಂದಿಗೆ ನಿಕಟ ಸಮನ್ವಯ ಸಾಽಸಲಿದ್ದಾರೆ ಎಂದು ತಿಳಿಸಿದ್ದಾರೆ.
ಲಂಕಾದ ಕೋಟ್ಮಲೆಯಲ್ಲಿ ಸಿಲುಕಿದ್ದ ಭಾರತೀಯರು, ವಿದೇಶಿ ಪ್ರಜೆಗಳು ಮತ್ತು ಶ್ರೀಲಂಕಾದವರು ಸೇರಿದಂತೆ ೨೪ ಮಂದಿಯನ್ನು ಗರುಡ ಕಮಾಂಡೋಗಳು ರಕ್ಷಿಸಿ ಕೊಲಂಬೊಗೆ ಸ್ಥಳಾಂತರಿಸಿದ್ದಾರೆ ಎಂದು ಭಾರತೀಯ ವಾಯುಪಡೆ ಭಾನುವಾರ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದೆ.
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…
ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…
ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್…