ಚೆನ್ನೈ: ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ʼಫೆಂಗಲ್ʼ ಚಂಡಮಾರುತ ಉಗಮವಾಗಿದ್ದು, ಶುಕ್ರವಾರದಿಂದಲೇ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ.
ಫೆಂಗಲ್ ಚಂಡಮಾರುತದಿಂದ ಉತ್ತರ ತಮಿಳುನಾಡಿನ ಹಲವು ಪ್ರದೇಶಗಳು ಮಳೆ ನೀರಿನಿಂದ ಜಲಾವೃತಗೊಂಡಿದೆ. ವಿಪತ್ತು ನಿರ್ವಹಣೆಗಾಗಿ ಪೊಲೀಸರು, ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ತಮಿಳನಾಡಿನಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಚೆನ್ನೈನ ಹನ್ನೆರಡು(12) ವಿಮಾನಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ ಮೆಟ್ರೊರೈಲು ಕಾರ್ಯನಿರ್ವಹಿಸುತ್ತಿದೆ.
ಚೆನ್ನೈನ ಎನ್ನೋರ್ ಪ್ರದೇಶದಲ್ಲಿ ಕಳೆದ 6 ಗಂಟೆಗಳಿಂದ 8ಸೆಂ.ಮೀ ಮಳೆಯಾಗಿದೆ. ಅಣ್ಣಾನಗರದಲ್ಲಿ 10 ಸೆಂ. ಮೀ ಮಳೆ ದಾಖಾಲಾಗಿದೆ ಎಂದು ಭಾರತೀಯ ಹವಮಾನ ಇಲಾಖೆ (IMD) ತಿಳಿಸಿದೆ.
ಫೆಂಗಲ್ ಚಂಡಮಾರುತವು ಶನಿವಾರ ಪುದುಚೇರಿಗೆ ಅಪ್ಪಳಿಸುವ ಸಾಧ್ಯತೆಯಿದೆ. ಮಧ್ಯಾಹ್ನ ಕಾರೈಕಲ್ ಮತ್ತು ಮಾಮಲ್ಲಪುರಂನಲ್ಲಿ ಭೂಕುಸಿತವಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ (IMD) ಎಚ್ಚರಿಸಿದೆ.
ಸಮುದ್ರದ ವಾತಾವರಣ ಪ್ರಕ್ಷುಬ್ದವಾಗಿದ್ದು, ಮೀನುಗಾರರು ಸಮುದ್ರಗಳಿಗೆ ಇಳಿಯದಂತೆ ಎಚ್ಚರಿಸಿದ್ದಾರೆ. ಹಾಗೆಯೇ ಮರೀನಾ ಬೀಚ್ ಸೇರಿದಂತೆ ಪ್ರಮುಖ ಬೀಚ್ಗಳಿಗೆ ಪ್ರವಾಸಿಗರು ಹೋಗದಂತೆ ನಿರ್ಭಂದಿಸಲಾಗಿದೆ.
ತಮಿಳುನಾಡು ಸರ್ಕಾರ ಶಾಲಾ ಕಾಲೇಜುಗಳಿಗೆ ಒಂದು ದಿನ (ನ.30) ರಜೆ ಘೋಷಿಸಿದೆ. ಅಲ್ಲದೇ ಉದ್ಯೋಗಿಗಳು ಮನೆಯಲ್ಲೇ ತಮ್ಮ ಕೆಲಸ ನಿರ್ವಹಿಸುವಂತೆ ಐಟಿ ಸಂಸ್ಥೆಗಳಿಗೆ ಸರ್ಕಾರದ ಕಡೆಯಿಂದ ಮನವಿ ಮಾಡಲಾಗಿದೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…