ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಚಂಡಮಾರುತ ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಇಂದು ಸಂಜೆಯವರೆಗೂ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಡಾನಾ ಚಂಡಮಾರುತದ ಮುನ್ನೆಚ್ಚರಿಕೆಯಾಗಿ ಸುಮಾರು 203 ರೈಲುಗಳನ್ನು ಸಹ ರದ್ದುಗೊಳಿಸಲಾಗಿದೆ.
ಚಂಡಮಾರುತದ ಪರಿಣಾಮ ಹಲವು ಕಡೆ ಜಲ ದಿಗ್ಭಂಧನ ಏರ್ಪಟ್ಟಿದ್ದು, ಸಾವಿರಾರು ಜನರನ್ನು ಆಶ್ರಯ ಕೇಂದ್ರಗಳಿಗೆ ಸ್ಥಳಾಂತರ ಮಾಡಲಾಗಿದೆ.
ಇಂದು ರಾತ್ರಿಯ ವೇಳೆಗೆ ಮಳೆ ಕಡಿಮೆಯಾಗಲಿದ್ದು, ನಾಳೆಯ ವೇಳೆಗೆ ಜನಜೀವನ ಸಹಜ ಸ್ಥಿತಿಯತ್ತ ಮರಳಲಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…