ದೇಶ- ವಿದೇಶ

ಉತ್ತರ ಪ್ರದೇಶದಲ್ಲಿ ಎಸ್ಪಿಗೆ ಫಲಿಸಿದ ದಲಿತ ಮಂತ್ರ

ಉತ್ತರಪ್ರದೇಶ: ಸಮಾಜವಾದಿ ಪಕ್ಷದ ಮಖ್ಯಸ್ಥ ಅಖಿಲೇಶ್‌ ಯಾದವ್‌ ಅವರ ಚುನಾವಣೆ ತಂತ್ರಗಾರಿಕೆ ಉತ್ತರ ಪ್ರದೇಶದಲ್ಲಿ ನಿರೀಕ್ಷೆಗೂ ಮೀರಿದ ಪ್ರತಿಫಲ ನೀಡಿದೆ. ಪಕ್ಷದಿಂದ ಹೊಸದಾಗಿ ಆಯ್ಕೆಯಾದ ಸಂಸದರ ಪೈಕಿ ಶೇ.೮೬ರಷ್ಟು ಸಂಸದರು ದಲಿತ, ಹಿಂದುಳಿದ ವರ್ಗ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಅಖಿಲೇಶ್‌ ಯಾದವ್‌ ಅವರು ಉತ್ತರ ಪ್ರದೇಶದಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರನ್ನು (ಪಿಡಿಎ) ಕೇಂದ್ರವಾಗಿಟ್ಟುಕೊಂಡು ಚುನಾವಣೆ ತಂತ್ರಗಾರಿಕೆ ಹೆಣೆದಿದ್ದರು. ಈ ಪಿಡಿಎ ತಂತ್ರಗಾರಿಗೆ ಅವರನ್ನ ಕೈಹಿಡಿದಿದೆ. ಸಮಾಜವಾದಿ ಪಕ್ಷದಿಂದ ಆಯ್ಕೆಯಾದ ೩೭ ಸಂಸದರ ಪೈಕಿ ೨೦ ಮಂದಿ ಹಿಂದುಳಿತ ವರ್ಗದವರು. ಪರಿಶಿಷ್ಟ ಜಾತಿಯ ೮ ಮಂದಿ ಮತ್ತು ಮುಸ್ಲಿಂ ಸಮುದಾಯದ ೪ ಮಂದಿ ಸಂಸತ್ತಿಗೆ ಆಯ್ಕೆಯಾಗಿದ್ದಾರೆ. ಮೇಲ್ವರ್ಗಕ್ಕೆ ಸೇರಿದ ಬ್ರಾಹ್ಮಣ, ವೈಶ್ಯ ಹಾಗೂ ಭುಮಿಹಾರ್‌ ಸಮುದಾಯದವರು ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ಪ್ರಮುಖ ಸಮುದಾಯವಾದ ಠಾಕೂರ ಸಮುದಾಯದಿಂದ ಆನಂದ್‌ ಭಡೋರಿಯಾ ಹಾಗೂ ಬೀರೇಂದ್ರ ಸಿಂಗ್‌ ಗೆಲುವು ಸಾಧಿಸಿದ್ದಾರೆ.

ದೇಶಾದ್ಯಂತ ಅಯೋಧ್ಯ ರಾಮಮಂದಿರ ನಿರ್ಮಾಣವನ್ನು ಪ್ರಮುಖ ಚುನಾವಣಾ ವಿಷಯವಾಗಿ ಬಿಜೆಪಿ ಬಿಂಬಿಸಿದ್ದರೂ, ರಾಮ ಜನ್ಮಭೂಮಿ ಮಾತ್ರ ಬಿಜೆಪಿಯನ್ನು ತಿರಸ್ಕರಿಸಿದೆ. ಇಲ್ಲಿ ಅಖಿಲೇಶ್‌ ಯಾದವ್‌ ಅವರ ದಲಿತ ಮಂತ್ರ ಕೈಹಿಡಿದಿದ್ದು, ಅಯೋಧ್ಯ ಪ್ರದೇಶ ಒಳಗೊಂಡಿರುವ ಫೈಝಾಬಾದ್‌ನಲ್ಲಿ ಎಸ್ಪಿಯ ದಲಿತ ಅಭ್ಯರ್ಥಿಗೆ ಜಯ ದೊರಕಿದೆ.

ಸಮಾಜವಾದಿ ಪಕ್ಷ ಇದೇ ಮೊದಲ ಬಾರಿಗೆ ಸಾಮಾನ್ಯ ಕ್ಷೇತ್ರದಿಂದ ದಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಹೊಸ ಪ್ರಯೋಗ ಮಾಡಿ, ಯಶಸ್ಸು ಕಂಡಿದೆ. ಉತ್ತರ ಪ್ರದೇಶದ ಮೀರಠ್‌ ಮತ್ತು ಫೈಝಾಬಾದ್‌ ಕ್ಷೇತ್ರದಿಂದ ಪರಿಶಿಷ್ಟ ವರ್ಗದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಅದರಲ್ಲೂ ಆಯೋಧ್ಯ ಒಳಗೊಂಡಿರುವ ಫೈಝಾಬಾದ್‌ ಕ್ಷೇತ್ರದಲ್ಲಿ ದಲಿತ ಅಭ್ಯರ್ಥಿ ಪಾಸಿ ಸಮುದಾಯದ ಅವಧೇಶ ಪ್ರಸಾದ್‌ ಅವರನ್ನು ಕಣಕ್ಕೆ ಇಳಿಸಿ ರಾಮನ ನೆಲೆಯಲ್ಲಿ ಬಿಜೆಪಿಯನ್ನು ನೆಲಕಚ್ಚಿಸಿದೆ.

ಫೈಝಾಬಾದ್‌ ಕ್ಷೇತ್ರದಲ್ಲಿ ಎಸ್ಪಿ ಅಭ್ಯರ್ಥಿ ಅವಧೇಶ್‌ ಪ್ರಸಾದ್‌ ಅವರು ಬಿಜೆಪಿಯ ಲಲ್ಲು ಸಿಂಗ್‌ ಅವರನ್ನು ೫೪೫೬೭ ಮತಗಳಿಂದ ಸೋಲಿಸಿದ್ದಾರೆ. ಮೀರಠ್‌ನಲ್ಲಿ ಪಕ್ಷದ ಸುನಿತಾ ವರ್ಮ ಎಂಬ ದಲಿತ ಮಹಿಳೆಯನ್ನು ಕಣಕ್ಕೆ ಇಳಿಸಿ ಬಿಜೆಪಿಯ ಅರುಣ್‌ ಗೋವಿಲ್‌ ಅವರನ್ನು ೧೦೫೦೦ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇನ್ನೂ ಮಿತ್ರ ಪಕ್ಷವಾದ ಕಾಂಗ್ರೆಸ್‌ ಕೂಡ ೬ ಕ್ಷೇತ್ರ ಗೆದ್ದಿದ್ದು, ಇವರಲ್ಲಿ ಹಿಂದುಳಿತ ವರ್ಗ, ದಲಿತ ಮತ್ತು ಮುಸ್ಲಿಂ ಸಮುದಾಯವರು ತಲಾ ಓರ್ವರು. ಕಾಶ್ಮೀರಿ ಬ್ರಹ್ಮಣ ರಾಹುಲ್‌ ಗಾಂಧಿ, ಭುಮಿಹಾರ್‌ ಸಮುದಾಯ್‌ ಉಜ್ವಲ್‌ ರೆಯೋತಿ ರಮಣ್‌ ಸಿಂಗ್‌ ಹಾಗೂ ಪಂಜಾಬಿ ಸಮುದಾಯದ ಕೆ.ಎಲ್‌ ಶರ್ಮ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ ಹಾಗೂ ಎಸ್ಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ೩೩ ಮಂದಿ ಹಿಂದುಳಿದ ವರ್ಗದವರು, ೧೯ ಮಂದಿ ಪರಿಶಿಷ್ಟ ಹಾಗೂ ಆರು ಮುಸ್ಲಿಂ ಸಮುದಾಯದವರು ಸೇರಿದ್ದರು.

ಇನ್ನು ಬಿಜೆಪಿಯ ಅಭ್ಯರ್ಥಿಗಳಲ್ಲಿ ಸಾಂಪ್ರದಾಯಿಕ ಮತದಾರರಾಗಿರುವ ಮೇಲ್ವರ್ಗದವರೇ ಅಧಿಕವಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

20 mins ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

3 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

4 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

6 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

7 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

8 hours ago