ದೇಶ- ವಿದೇಶ

ಒಡಿಸ್ಸಾ ಕರಾವಳಿಗೆ ಅಪ್ಪಳಿಸಿದ ದಾನಾ ಚಂಡಮಾರುತ

ಒಡಿಶಾ: ವಾಯುಭಾರ ಕುಸಿತದಿಂದ ಪೂರ್ವ ಕರಾವಳಿ ರಾಜ್ಯಗಳಾದ ಒಡಿಸ್ಸಾ ಮತ್ತು ಪಶ್ಚಿಮ ಬಂಗಾಳಕ್ಕೆ ಗುರುವಾರ ( ಅಕ್ಟೋಬರ್‌ 24 ) ರಾತ್ರಿ ದಾನಾ ಚಂಡಮಾರುತವು ಗಂಟೆಗೆ 110-120 ಕಿಲೋ ಮೀಟರ್‌ ವೇಗದಲ್ಲಿ ಅಪ್ಪಳಿಸಿದೆ.

ಚಂಡಮಾರುತದ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿ, ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ. ದಾನಾ ಚಂಡಮಾರುತವು ಗಂಟೆಗೆ 110-120 ಕಿಲೋ ಮೀಟರ್‌ ವೇಗದಲ್ಲಿ ಒಡಿಸ್ಸಾ ಕರಾವಳಿಗೆ ಅಪ್ಪಳಿಸಿದ್ದು, ಅನೇಕ ಪೂರ್ವ ಕರಾವಳಿ ರಾಜ್ಯಗಳಲ್ಲಿ ಇದರ ಪ್ರಭಾವ ಇರಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಸಿದೆ.

ದಾನಾ ಚಂಡಮಾರುತದಿಂದ ಒಡಿಸ್ಸಾದ ಪುರಿ, ಪುರ್‌ದೀಪ್‌, ಧಮ್ರಾ, ಭುವನೇಶ್ವರ್ ಇನ್ನು ಅನೇಕ ಜಿಲ್ಲೆಗಳಲ್ಲಿ ತುಂಬಾ ಮಳೆಯಾಗುತ್ತಿದ್ದು ಭಾರಿ ಭೂ ಕುಸಿತದೊಂದಿಗೆ ಅನೇಕ ನಷ್ಟಗಳು ಸಂಭವಿಸಿದೆ. ಮೀನುಗಾರರಿಗೆ ಎರಡು ದಿನ ಸಮುದ್ರಕ್ಕೆ ಇಳಿಯದಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜನರ ರಕ್ಷಣೆಗಾಗಿ ಒಡಿಸ್ಸಾ ಸರ್ಕಾರವು ಭಾರತೀಯ ಕರಾವಳಿ ಪಡೆ, ಎನ್‌ಡಿಆರ್‌ಎಫ್‌ ಮತ್ತು ಒಡಿಆರ್‌ಎಫ್‌ ತಂಡಗಳಿಗೆ ಸೂಚಿಸಿದೆ. ಹಾಗೆಯೇ ಸುಮಾರು 800ಕ್ಕೂ ಹೆಚ್ಚು ಪರಿಹಾರ ಕೇಂದ್ರಗಳನ್ನು ಸ್ಥಾಪಿಸಿದೆ. ಸಚಿವರು, ಶಾಸಕರು, ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ನಿರಾಶ್ರಿತರಿಗೆ ಆಗತ್ಯ ಸಾಮಗ್ರಿಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಶ್ಚಿಮ ಬಂಗಾಳ, ಜಾರ್ಖಂಡ್‌ನಲ್ಲೂ ಹಾನಿ
ಡಾನಾ ಚಂಡಮಾರುತಕ್ಕೆ ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, 300ಕ್ಕೂ ಹೆಚ್ಚು ರೈಲುಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಚಂಡಮಾರುತದ ಬಗ್ಗೆ ಮಾಹಿತಿ ಪಡೆಯುತ್ತಿದ್ದು, ಸುಮಾರು 2,43,374 ಜನರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆಯುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಜಾರ್ಖಂಡ್‌ನಲ್ಲಿ ಇದು ಪರಿಣಾಮ ಬೀರಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ ಸೂಚಿಸಿದೆ.

andolana

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

2 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

2 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

2 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

2 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

3 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

3 hours ago