ಅಮೆರಿಕಾ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಗೀತಾ ಶಿವರಾಜ್ ಕುಮಾರ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್ ಮಾಡಿದ್ದಾರೆ.
ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.
ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…