ದೇಶ- ವಿದೇಶ

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಪೋಸ್ಟ್‌

ಅಮೆರಿಕಾ: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಶಿವರಾಜ್‌ ಕುಮಾರ್‌ ಆರೋಗ್ಯದ ಕುರಿತು ಗೀತಾ ಶಿವರಾಜ್‌ ಕುಮಾರ್‌ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್‌ ಮಾಡಿದ್ದಾರೆ.

ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್‌ ಕೇರ್‌ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್‌ ಮನೋಹರನ್‌ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.

ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.

ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.

ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಫೆ.೫ರಂದು ಶ್ರೀ ಶಂಭುಲಿಂಗೇಶ್ವರ ದೇವಾಲಯ ಲೋಕಾರ್ಪಣೆ

ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ  ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…

2 hours ago

ಬಿಪಿಎಲ್ ಕಾರ್ಡ್ ಇಲ್ಲದಿದ್ದರೆ ಜಿಲ್ಲಾಸ್ಪತ್ರೆ ದುಬಾರಿ!

ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …

2 hours ago

ಸುರಕ್ಷತೆಯ ಗ್ಯಾರಂಟಿ ಇಲ್ಲದ ಶಾಲಾ ವಾಹನಗಳಲ್ಲಿ ಮಕ್ಕಳ ಪ್ರಯಾಣ!

ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…

2 hours ago

ಈ ಜಾಗ ನೋಡಿ; ಕಸ ಹಾಕುವ ಮುನ್ನ ಯೋಚನೆ ಮಾಡಿ!

ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…

2 hours ago

ಉಂಡವಾಡಿ ಪೈಪ್‌ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆಗಳು

ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…

2 hours ago

ಫ್ಲೋರೈಡ್‌ಯುಕ್ತ ನೀರು ಕುಡಿದು ಕಿಡ್ನಿ ಸಮಸ್ಯೆ!

ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್‌ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…

2 hours ago