ಅಮೆರಿಕಾ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಗೀತಾ ಶಿವರಾಜ್ ಕುಮಾರ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್ ಮಾಡಿದ್ದಾರೆ.
ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.
ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…