ಅಮೆರಿಕಾ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದಾರೆ.
ಶಿವರಾಜ್ ಕುಮಾರ್ ಆರೋಗ್ಯದ ಕುರಿತು ಗೀತಾ ಶಿವರಾಜ್ ಕುಮಾರ್ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್ ಮಾಡಿದ್ದಾರೆ.
ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್ ಕೇರ್ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್ ಮನೋಹರನ್ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.
ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.
ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.
ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.
ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…