ದೇಶ- ವಿದೇಶ

ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಪೋಸ್ಟ್‌

ಅಮೆರಿಕಾ: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರ ಆರೋಗ್ಯದ ಬಗ್ಗೆ ಪುತ್ರಿ ನಿವೇದಿತಾ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ಮಾಹಿತಿ ನೀಡಿದ್ದಾರೆ.

ಶಿವರಾಜ್‌ ಕುಮಾರ್‌ ಆರೋಗ್ಯದ ಕುರಿತು ಗೀತಾ ಶಿವರಾಜ್‌ ಕುಮಾರ್‌ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಈಗ ನಿವೇದಿತಾ ಶಿವಣ್ಣ ಅವರ ಆರೋಗ್ಯ ಕುರಿತು ಟ್ವೀಟ್‌ ಮಾಡಿದ್ದಾರೆ.

ಆರೋಗ್ಯದ ಬಗ್ಗೆ ಬರೆದುಕೊಂಡಿರುವ ನಿವೇದಿತಾ ಅವರು, ದೇವರ ಕೃಪೆಯಿಂದ ನನ್ನ ತಂದೆಯ ಸರ್ಜರಿ ಯಶಸ್ವಿಯಾಗಿ ಸಂಪೂರ್ಣಗೊಂಡಿದೆ. ಈಗ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣರಾಗಿರುವ ಮಿಯಾಮಿ ಹೆಲ್ತ್‌ ಕೇರ್‌ನಲ್ಲಿ ಅಸಾಧಾರಣ ಸೇವೆ ಒದಗಿಸಿದ ವೈದ್ಯಕೀಯ ತಂಡ ಮತ್ತು ಡಾ.ಮುರುಗೇಶ್‌ ಮನೋಹರನ್‌ ಅವರ ಅಚಲ ಬೆಂಬಲ ಮತ್ತು ಕಾಳಜಿಗೆ ನಮ್ಮ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ.

ಈ ಪ್ರಯಾಣದಲ್ಲಿ ನನ್ನ ತಂದೆ ತೋರಿದ ಧೈರ್ಯ ಮತ್ತು ಶಕ್ತಿಗೆ ಅವರೇ ಸಾಟಿ. ಈ ಸವಾಲುಗಳನ್ನು ಎದುರಿಸುವಲ್ಲಿ ಅವರು ತೋರಿದ ಮನೋಬಲ ನಮಗೂ ಆಶಾಭಾವ ಮೂಡಿಸಿ ನಮ್ಮೆಲ್ಲರಿಗೂ ಧೈರ್ಯ ಒದಗಿಸಿದೆ.

ಇದರ ನಡುವೆ ಎಲ್ಲಾ ಅಭಿಮಾನಿ ದೇವರುಗಳಿಗೂ, ಕುಟುಂಬ ಸದಸ್ಯರಿಗೂ. ಸ್ನೇಹಿತರಿಗೂ ಮತ್ತು ಮಾಧ್ಯಮ ಸದಸ್ಯರಿಗೂ ತುಂಬು ಹೃದಯದ ಕೃತಜ್ಞತೆಗಳನ್ನು ವ್ಯಕ್ತಪಡಿಸಲು ಬಯಸುತ್ತೇವೆ.

ನಿಮ್ಮೆಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಶಕ್ತಿಯ ಮೂಲವಾಗಿದೆ. ನೀವೆಲ್ಲರೂ ತೋರಿದ ಕಾಳಜಿ ನಮಗೆ ಮುನ್ನಡೆಯುವ ಬಲ ತುಂಬಿದ್ದು, ಅದಕ್ಕೆ ನಾವೆಂದಿಗೂ ಆಭಾರಿಯಾಗಿರುತ್ತೇವೆ.

ತಂದೆಯ ಚೇತರಿಕೆಯ ಕುರಿತು ಬರುವ ದಿನಗಳಲ್ಲಿ ತಿಳಿಸುತ್ತೇವೆ. ಈ ಪಯಣದಲ್ಲಿ ನಾವು ಮುಂದಿನ ಹೆಜ್ಜೆ ಇಡುತ್ತಿರಲು ನಿಮ್ಮ ಪ್ರಾರ್ಥನೆಯ ಮೂಲಕ ನಮ್ಮನ್ನ ಆಶೀರ್ವದಿಸಿ ಎಂದು ಕೇಳಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago