ದೇಶ- ವಿದೇಶ

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ ಸಹಚರ ಕುಖ್ಯಾತ ಅಂತರರಾಷ್ಟ್ರೀಯ ಮಾದಕ ವಸ್ತು ಕಿಂಗ್ ಪಿನ್ ಸಲೀಂ ಡೋಲನನ್ನು ಭಾರತಕ್ಕೆ ಗಡೀಪಾರು ಮಾಡಲಾಗಿದೆ.

ರೆಡ್ ಕಾರ್ನರ್ ನೋಟೀಸ್ ಅಡಿಯಲ್ಲಿ ಬೇಕಾಗಿದ್ದ ಕುಖ್ಯಾತ ಭಾರತೀಯ ಮಾದಕವಸ್ತು ದೊರೆ ಡೋಲಾನನ್ನು ಇಸ್ತಾನ್‍ಬುಲ್‌ನಲ್ಲಿ ನಡೆದ ಉನ್ನತ ಮಟ್ಟದ ಕಾರ್ಯಾಚರಣೆಯ ನಂತರ ಟರ್ಕಿಶ್ ಅಧಿಕಾರಿಗಳು ಬಂಧಿಸಿದ ಒಂದು ದಿನದ ಬಳಿಕ ಗಡೀಪಾರು ಮಾಡಿದ್ದಾರೆ. ಇದರಿಂದ ದಾವುದ್ ಇಬ್ರಾಹಿಂಗೆ ಬಾರಿ ಹಿನ್ನಡೆಯಾಗಿದ್ದು, ಇದು ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಾಪಾರಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಟರ್ಕಿಯ ಇಸ್ತಾನ್‍ಬುಲ್‌ನಲ್ಲಿ ಬಂಧನಕ್ಕೊಳಗಾದ ಕೆಲವು ದಿನಗಳ ನಂತರ ಡೋಲಾನನ್ನು ಗಡೀಪಾರು ಮಾಡಲಾಗಿದೆ. ರೆಡ್ ಕಾರ್ನರ್ ನೋಟೀಸ್ ಆಧರಿಸಿ ಟರ್ಕಿಯ ರಾಷ್ಟ್ರೀಯ ಗುಪ್ತಚರ ಸಂಸ್ಥೆ, ಎಂಐಟಿ ಮತ್ತು ಸ್ಥಳೀಯ ಪೊಲೀಸ್ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಡೋಲಾನನ್ನು ಬಂಧಿಸಲಾಗಿದೆ.

ಯಶಸ್ವಿ ಜಂಟಿ ಕಾರ್ಯಾಚರಣೆಯ ನಂತರ, ಮುಂಜಾನೆ ವಿಶೇಷ ವಿಮಾನದ ಮೂಲಕ ಡೋಲಾನನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕರೆತರಲಾಗಿದೆ. ಜಾಗತಿಕ ಸಿಂಡಿಕೇಟ್‌ಗಳೊಂದಿಗಿನ ಅವರ ಸಂಪರ್ಕದ ಕುರಿತು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

ಹೆಚ್ಚಿನ ವಿಚಾರಣೆಗಾಗಿ ಮುಂಬೈ ಪೊಲೀಸರಿಗೆ ಹಸ್ತಾಂತರಿಸುವ ನಿರೀಕ್ಷೆಯಿದೆ. ಇಸ್ತಾನ್‍ಬುಲ್ ಪೊಲೀಸ್ ಇಲಾಖೆಯ ಮಾದಕ ದ್ರವ್ಯ ಅಪರಾಧ ವಿಭಾಗವು ಈತನನ್ನು ಏ.25 ರಂದು ಬಂಧಿಸಿತು. ಮಾದಕವಸ್ತು ಕಳ್ಳಸಾಗಣೆಗಾಗಿ ಬೇಕಾಗಿದ್ದ ಡೋಲಾ, ಬೇಲಿಕ್ಡುಜು ಜಿಲ್ಲೆಯ ನಿವಾಸವೊಂದರಲ್ಲಿ ಅಡಗಿಕೊಂಡಿದ್ದ. ತಾಂತ್ರಿಕ ಮತ್ತು ಭೌತಿಕ ಕಣ್ಗಾವಲು ಮೂಲಕ ಭದ್ರತಾ ತಂಡಗಳು ಶಂಕಿತನ ನಿಖರವಾದ ಸ್ಥಳವನ್ನು ದೃಢಪಡಿಸಿದ ನಂತರ, ಡೋಲಾನನ್ನು ಬಂಧಿಸಲು ಗುರುತಿಸಲಾದ ವಿಳಾಸದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಬಂಧನಕ್ಕೊಳಗಾದ ನಂತರ, ಅವನನ್ನು ತಕ್ಷಣ ಭಾರತಕ್ಕೆ ಗಡೀಪಾರು ಮಾಡುವ ಪ್ರಕ್ರಿಯೆಗೊಳಪಡಿಸಲಾಯಿತು.

 

ಆಂದೋಲನ ಡೆಸ್ಕ್

Recent Posts

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

1 hour ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

2 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

7 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

12 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

12 hours ago