Mysore
25
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಮಲ್ಲಿಕಾರ್ಜುನ ಖರ್ಗೆಗೆ ಮತ್ತೊಂದು ಪ್ರಶ್ನೆ ಮಾಡಿದ ಶಾಸಕ ಯತ್ನಾಳ್‌

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಲೇವಡಿ ಮಾಡಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಡಿಸಿಎಂ ಡಿಕೆಶಿ ಅವರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.

ಇನ್ನು ಯತ್ನಾಳ್‌ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದೆಹಲಿಗೆ ಸಚಿವ ಸೋಮಣ್ಣ ಅವರ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಾಗಿದ್ದಾರೆ. ರೈಲ್ವೆ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು.

ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಸಂತೋಷ್‌ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.

Tags:
error: Content is protected !!