ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಡಿಸಿಎಂ ಡಿಕೆಶಿ ಅವರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.
ಇನ್ನು ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದೆಹಲಿಗೆ ಸಚಿವ ಸೋಮಣ್ಣ ಅವರ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಾಗಿದ್ದಾರೆ. ರೈಲ್ವೆ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು.
ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸಂತೋಷ್ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…