ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪುಣ್ಯಸ್ನಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿ ಬಳಿ ಎಷ್ಟು ಪಾಪ ಕಳೀತು ಎಂದು ವರದಿ ಪಡೆಯಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿಂದು ಮಾಧ್ಯದಮವರೊಂದಿಗೆ ಮಾತನಾಡಿದ ಅವರು, ಅವರವರ ವೈಯಕ್ತಿಕ ಭಕ್ತಿಯ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಡಿಸಿಎಂ ಡಿಕೆಶಿ ಅವರು ಮಹಾಕುಂಭಮೇಳದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಎಷ್ಟು ಪಾಪ ಕಳೆದು ಹೋಯಿತು ಎಂದು ಮಲ್ಲಿಕಾರ್ಜುನ ಖರ್ಗೆ ವರದಿ ಪಡೆಯಬೇಕು ಎಂದು ಆಗ್ರಹಿಸಿದರು.
ಇನ್ನು ಯತ್ನಾಳ್ ಟೀಂ ದೆಹಲಿಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ದೆಹಲಿಗೆ ಸಚಿವ ಸೋಮಣ್ಣ ಅವರ ಮನೆ ಪೂಜೆ ಸಲುವಾಗಿ ಬಂದಿದ್ದೇವೆ. ಮುಂದೆ ಏನಾಗುತ್ತದೆ ಎಂದು ನಮಗೆ ಗೊತ್ತಿಲ್ಲ. ಎಲ್ಲರಿಗೂ ಬನ್ನಿ ಎಂದು ಆಹ್ವಾನ ನೀಡಿದ್ದರು. ಹಾಗಾಗಿ ಇಲ್ಲಿಗೆ ಬಂದಿದ್ದೇವೆ. ಸೋಮಣ್ಣನವರು ನಮಗೆ ಆತ್ಮೀಯರಾಗಿದ್ದಾರೆ. ರೈಲ್ವೆ ಮಂತ್ರಿಗಳಾದ ಮೇಲೆ ನಮ್ಮ ಕೆಲಸ ಮಾಡಿಕೊಟ್ಟಿದ್ದಾರೆ ಎಂದರು.
ಇನ್ನು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬದಲಾಗುತ್ತಾರೆ ಎಂಬ ವಿಶ್ವಾಸವಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸಂತೋಷ್ ಅವರ ಮೇಲೆ ನಂಬಿಕೆ ಇದೆ ಎಂದು ಹೇಳಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…