ದೇಶ- ವಿದೇಶ

2028ಕ್ಕೆ ರಾಜ್ಯದಲ್ಲಿ ದೊಡ್ಡ ಕ್ರಾಂತಿಯಾಗುತ್ತೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಆಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ಹೈಕಮಾಂಡ್‌ ನಾಯಕರ ಭೇಟಿ ಬಳಿಕ ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನವೆಂಬರ್‌ ಕ್ರಾಂತಿಯೂ ಆಗಲ್ಲ, ಡಿಸೆಂಬರ್‌ ಕ್ರಾಂತಿಯೂ ಆಗಲ್ಲ. ಜನವರಿ, ಫೆಬ್ರವರಿಯಲ್ಲಿಯೂ ಕ್ರಾಂತಿಯಾಗಲ್ಲ. ಕ್ರಾಂತಿಯಾಗೋದು 2028ಕ್ಕೆ ಎಂದು ಹೇಳಿದರು.

ಇದನ್ನು ಓದಿ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

2028ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕ್ರಾಂತಿಯಾಗಿ ಕಾಂಗ್ರೆಸ್‌ ಸರ್ಕಾರವೇ ಮತ್ತೆ ಅಧಿಕಾರಕ್ಕೆ ಬರುತ್ತದೆ. ಈ ಮೂಲಕ 2028ಕ್ಕೆ ಮತ್ತೆ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಹೇಳಿದರು.

ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನವೆಂಬರ್‌ನಲ್ಲಿ ದೊಡ್ಡ ಕ್ರಾಂತಿಯಾಗುತ್ತದೆ ಎಂದು ಪದೇ ಪದೇ ಮಾತನಾಡಿಕೊಳ್ಳುತ್ತಿದ್ದ ರಾಜಕಾರಣಿಗಳ ಬಾಯಿ ಮುಚ್ಚಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಕುಡಿವ ನೀರು, ಒಳಚರಂಡಿ ವ್ಯವಸ್ಥೆಗೆ 800 ಕೋಟಿ ರೂ. : ಸಚಿವ ಬೈರತಿ ಸುರೇಶ್

ವಿಧಾನಸಭೆ : ಸಾಂಸ್ಕೃತಿಕ ನಗರ ಮೈಸೂರಿನ ಕುಡಿಯುವ ನೀರು ಮತ್ತು ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ…

12 mins ago

ಸಿಲಿಂಡರ್‌ಗಳ ಮೇಲೆ ಕಳ್ಳರ ಕಣ್ಣು!

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಸಂಘರ್ಷದಿಂದ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ. ಈ ಮಧ್ಯೆ ಸಿಲಿಂಡರ್‌ ಕಳ್ಳತನ ಸಹ ಹೆಚ್ಚಾಗಿದ್ದು…

1 hour ago

ಇರಾನ್‌ ನೂತನ ಸುಪ್ರೀಂ ಲೀಡರ್‌ಗೆ ಕಾಲು ಕಟ್‌, ಕೋಮಾಗೆ ಜಾರಿದ ಮೊಜ್ತಾಬಾ? ದಾಳಿ ಬಗ್ಗೆ ಸಿಗದ ಸ್ಪಷ್ಟನೆ

ಟೆಹ್ರಾನ್ : ಇರಾನ್- ಇಸ್ರೇಲ್‌,‌ ಅಮೆರಿಕಾ ಯುದ್ಧ ದಿನಕ್ಕೊಂದು ಸ್ವರೂಪ ಪಡೆಯುತ್ತಿದ್ದು, ತಂದೆ ಸಾವಿನ ಬಳಿಕ ನೇಮಕಗೊಂಡ ಇರಾನ್‌ ಸುಪ್ರೀಂ…

2 hours ago

ಅಕ್ರಮ ಮರ ಕಡಿತಲೆ ತಡೆಗೆ ಸಚಿವ ಈಶ್ವರ್‌ ಖಂಡ್ರೆ ಖಡಕ್‌ ಸೂಚನೆ

ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…

3 hours ago

ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…

3 hours ago

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…

4 hours ago