ನವದೆಹಲಿ: ವಿಧಾನ ಪರಿಷತ್ ಸದಸ್ಯರ ನಾಮ ನಿರ್ದೇಶನ ಸದ್ಯದಲೇ ಆಗಲಿದ್ದು, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ನೀಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು(ಏಪ್ರಿಲ್.4) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗಷ್ಟೇ ವಿಧಾನ ಪರಿಷತ್ ಸದಸ್ಯರ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದು, ಕಾರ್ಯಕರ್ತರಿಗೆ ಅವಕಾಶ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ. ಅಲ್ಲದೇ ಸದನದಲ್ಲಿ ಧ್ವನಿ ಎತ್ತುವವರಿಗೆ ಪಕ್ಷದಲ್ಲಿ ಸ್ಥಾನ ಕೊಡಬೇಕಾಗಿದೆ. ಹೀಗಾಗಿ ಸದ್ಯದಲ್ಲೇ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ನಿರ್ದೇಶನವಾಗಲಿದೆ ಎಂದು ಹೇಳಿದರು.
ಇನ್ನು ನಮ್ಮ ಪಕ್ಷದಿಂದ ಖಾಲಿ ಇರುವ ನಿರುದ್ಯೋಗಿಗಳಿಗೆ ಅವಕಾಶ ನೀಡಿದಂತೆ ಆಗಬಾರದು. ಹಾಗಾಗಿ ಉತ್ತಮವವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕೆಂಬುದು ನಮ್ಮ ಅಭಿಪ್ರಾಯವಾಗಿದೆ ಎಂದರು.
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…
ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…