ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಲ್ಕು ವಾರಗಳವರೆಗೆ ಮೂಂದೂಡಿಕೆ ಮಾಡಿದೆ.
ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಲೋಕಾಯುಕ್ತ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಡಿ.ಕೆ.ಶಿವಕುಮಾರ್ ಮತ್ತು ಸಿಬಿಐ ಪರ ತಕರಾರು ಸಲ್ಲಿಸಲು ವಕೀಲರಿಗೆ ನಾಲ್ಕು ವಾರಗಳ ಕಾಲ ಮುಂದೂಡಿಕೆ ಮಾಡಲಾಗಿದೆ.
ಇನ್ನು ಶಾಸಕ ಬವಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ಅವರು ಆದಾಯ ಮೀರಿ ಆಸ್ತಿಗಳಿಕೆ ಕೇಸ್ಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಈ ವಿಚಾರವಾಗಿ ರಾಜ್ಯ ಮತ್ತು ಸಿಬಿಐ ನಡುವಿನ ವಿವಾದವನ್ನು ಸುಪ್ರೀಂಕೋರ್ಟ್ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸುಪ್ರೀಕೋರ್ಟ್ ಮೆಟ್ಟಿಲೇರಿ ಅರ್ಜಿ ಸಲ್ಲಿಸಿದ್ದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…