ದೇಶ- ವಿದೇಶ

ಕೋವಿಡ್ ಲಸಿಕೆ ಅಡ್ಡಪರಿಣಾಮಗಳಿಂದ ಸಾವು: ತುರ್ತು ಪರಿಹಾರ ಕ್ರಮಕ್ಕೆ ಕೇರಳ ಹೈಕೋರ್ಟ್ ಸೂಚನೆ

ತಿರುವನಂತಪುರ: ಕೋವಿಡ್ ಲಸಿಕೆ ಅಡ್ಡಪರಿಣಾಮದಿಂದ ಸಾವನ್ನಪ್ಪಿದ ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ವಿತರಿಸಲು ತುರ್ತಾಗಿ ಮಾರ್ಗಸೂಚಿ ರೂಪಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಕೇರಳ ಹೈಕೋರ್ಟ್ ಬುಧವಾರ ಸೂಚಿಸಿದೆ

ಸಮಸ್ಯೆ ಗಂಭೀರವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ತುರ್ತಾಗಿ ಪರಿಹಾರ ಒದಗಿಸುವುದನ್ನು ಪರಿಗಣಿಸಬೇಕು ಎಂದು ನ್ಯಾಯಮೂರ್ತಿ ವಿ ಜಿ ಅರುಣ್ ಅಭಿಪ್ರಾಯಪಟ್ಟರು.

ಇದು ನಾವು ಎದುರಿಸಿದ ರಾಷ್ಟ್ರೀಯ ವಿಪತ್ತು. ಪ್ರಸ್ತುತ ಪ್ರಕರಣ ಅತ್ಯಂತ ನೈಜವಾದುದಾಗಿದ್ದು ಅದನ್ನು ಇತ್ಯರ್ಥಪಡಿಸಬೇಕಿದೆ. ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದಂತೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯ ಸಮಸ್ಯೆಗಳು ಕಂಡುಬಂದಿವೆ. ಈ ವ್ಯಕ್ತಿಗಳಿಗೆ ಪರಿಹಾರ ನೀಡಲು ಸೂಕ್ತ ಮಾರ್ಗಸೂಚಿ, ಸರಿಯಾದ ಯೋಜನೆ ರೂಪಿಸುವ ಪ್ರಯತ್ನ ಅಗತ್ಯವಿದ್ದು ಅದನ್ನು ಮಾಡಬೇಕಿದೆ. ಸುಖಾಸುಮ್ಮನೆ ಆದೇಶ ನೀಡುವ ಬದಲು ತರ್ಕಬದ್ಧ ತೀರ್ಪು ನೀಡುವ ಸಲುವಾಗಿ ಅವರು ಯಾವ ಕ್ರಮ ತೆಗೆದುಕೊಂಡಿದ್ದಾರೆ ಎಂಬುದನ್ನು ದಾಖಲೆಯಲ್ಲಿ ನೀಡಲಿ. ಇದು ನಗೆಪಾಟಲಿನ ವಿಚಾರವಲ್ಲ, ನಾನಿದನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತೇನೆ” ಎಂದು ಅವರು ಮೌಖಿಕವಾಗಿ ಟೀಕಿಸಿದರು.

ಕುಟುಂಬದ ಆಧಾರವಾಗಿದ್ದವರು ಸಾವಿಗೀಡಾಗಿರುವ ಹಿನ್ನೆಲೆಯಲ್ಲಿ ಅವರನ್ನು ಅವಲಂಬಿಸಿದ್ದ ಕುಟುಂಬ ಸದಸ್ಯರು ತೀವ್ರ ತೊಂದರೆ ಎದುರಿಸುತ್ತಿದ್ದು ಪರಿಹಾರ ಪ್ರಕ್ರಿಯೆ‌ ತ್ವರಿತಗೊಳಿಸಬೇಕು ಎಂಬ ಅರ್ಜಿದಾರರ ವಾದದ ಗಂಭೀರತೆಯನ್ನು ನ್ಯಾಯಾಲಯ ಮನ್ನಿಸಿತು.

“ಅರ್ಜಿದಾರರ ಪರ ವಕೀಲರು ಎತ್ತಿರುವ ಅನುಮಾನಗಳು ಸಾಧಾರವಾಗಿವೆ ಎಂದು ನನಗನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಡೆಯಿಂದ ತುರ್ತು ಕ್ರಮದ ಅಗತ್ಯವಿದೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು. ಆಗಸ್ಟ್‌ 30ಕ್ಕೆ ಪ್ರಕರಣದ ಮುಂದಿನ ವಿಚಾರಣೆ ನಿಗದಿಯಾಗಿದೆ.

andolana

Recent Posts

ಕೊಲೆ ಪ್ರಕರಣ | ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋದ ಶಾಸಕ ವಿನಯ್‌ ಕುಲಕರ್ಣಿ

ಬೆಂಗಳೂರು : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್…

1 min ago

ಅಪರಿಚಿತ ವ್ಯಕ್ತಿಯ ಕೊಲೆ ಜಾಡು ಪತ್ತೆ!

ಮೈಸೂರು : ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮದ್ಯ ಸೇವಿಸಿ ಬಂದು ಕಿರುಕುಳ…

15 mins ago

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

59 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

1 hour ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago